Advertisement
ಸುದ್ದಿಗಳು

ಪರಿಸರ ಸ್ವಚ್ಛ ಮಾಡುವುದರೊಂದಿಗೆ ಬಕ್ರೀದ್ ಹಬ್ಬ ಅಚರಿಸಿದ ಜಟ್ಟಿಪಳ್ಳ ಯುವಕರು

Share

ಸುಳ್ಯ: ಕರ್ನಾಟಕ ಮತ್ತು ಕೇರಳ ನೆರೆಯ ಪ್ರಭಾವದ ನೋವಿನ ಮಧ್ಯೆ ಈದ್ ಆಚರಣೆ ಬಹಳ ಸರಳವಾಗಿ ಅಚರಿಸುವ ಉದ್ದೇಶದಿಂದ ಜಟ್ಟಿಪಳ್ಳದ ಯುವಕರು ಸ್ವಚ್ಛತಾ ಅಭಿಯಾನ ಮೂಲಕ ಆಚರಿಸಿದರು.

ಸಿ.ಎಫ್.ಸಿ ಜಟ್ಟಿಪಳ್ಳ ಇದರ ವತಿಯಿಂದ ನಡೆದುಕೊಂಡು ಬರುತ್ತಿರುವ ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನದ 3 ನೇ ಹಂತದ ಕಾರ್ಯಕ್ರಮ ಬಕ್ರೀದ್ ಹಬ್ಬದ ದಿನದಂದು ಜರಗಿತು.

ಡಿಗ್ರಿ  ಕಾಲೇಜ್ ರೋಡ್ ಜಟ್ಟಿಪಳ್ಳವಾಗಿ ಕನಿಕರಪಳ್ಳ ಸಂಪರ್ಕ ರಸ್ತೆಯು (ಕಾಂಕ್ರೀಟ್) ಪಾಚಿ ಹಿಡಿದು ನಡೆಯಲು ಕಷ್ಟದ ಸ್ಥಿತಿಯಲ್ಲಿತ್ತು. ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನ ಇದರ ಮೂರನೇ ಹಂತದ ಕಾರ್ಯಕ್ರಮ ದಲ್ಲಿ ಶುಚಿಗೊಳಿಸಿದರು .

ಅಭಿಯಾನದಲ್ಲಿ   ಸಿ.ಎಫ್.ಸಿ ಅಧ್ಯಕ್ಷ ನಾಸಿರ್ ಸಿ.ಎ, ಗ್ರೀನ್ ಬಾಯ್ಸ್ ಅಸೋಸಿಯೇಶನ್ ಅಧ್ಯಕ್ಷ ಶಿಹಾಬ್ ಷಾ, ಜಟ್ಟಿಪಳ್ಳ ಫ್ರೆಂಡ್ಸ್ ಅಧ್ಯಕ್ಷ ಶರೀಫ್ , ಕರವೇ ಸ್ವಾಭಿಮಾನಿ ಬಣದ ಸುಳ್ಯ ನಗರ ಅಧ್ಯಕ್ಷ ರಶೀದ್ ಜಟ್ಟಿಪಳ್ಳ, ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಸಿ ಎಫ್ ಸಿ ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್ ಹಾಗೂ ಪದಾಧಿಕಾರಿಗಳಾದ ಸತ್ಯನಾರಯಯಣ, ಆಶಿರ್ ಜಟ್ಟಿಪಳ್ಳ, ಸುಲೈಮಾನ್ ಬಾಷ, ನೌಫಲ್ ಜಟ್ಟಿಪಳ್ಳ, ಫೈಸಲ್ ಜೆಟಿಪಿ ಮೊದಲಾದವರು ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

18 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

19 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago