ಸುಳ್ಯ: ಕರ್ನಾಟಕ ಮತ್ತು ಕೇರಳ ನೆರೆಯ ಪ್ರಭಾವದ ನೋವಿನ ಮಧ್ಯೆ ಈದ್ ಆಚರಣೆ ಬಹಳ ಸರಳವಾಗಿ ಅಚರಿಸುವ ಉದ್ದೇಶದಿಂದ ಜಟ್ಟಿಪಳ್ಳದ ಯುವಕರು ಸ್ವಚ್ಛತಾ ಅಭಿಯಾನ ಮೂಲಕ ಆಚರಿಸಿದರು.
ಸಿ.ಎಫ್.ಸಿ ಜಟ್ಟಿಪಳ್ಳ ಇದರ ವತಿಯಿಂದ ನಡೆದುಕೊಂಡು ಬರುತ್ತಿರುವ ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನದ 3 ನೇ ಹಂತದ ಕಾರ್ಯಕ್ರಮ ಬಕ್ರೀದ್ ಹಬ್ಬದ ದಿನದಂದು ಜರಗಿತು.
ಡಿಗ್ರಿ ಕಾಲೇಜ್ ರೋಡ್ ಜಟ್ಟಿಪಳ್ಳವಾಗಿ ಕನಿಕರಪಳ್ಳ ಸಂಪರ್ಕ ರಸ್ತೆಯು (ಕಾಂಕ್ರೀಟ್) ಪಾಚಿ ಹಿಡಿದು ನಡೆಯಲು ಕಷ್ಟದ ಸ್ಥಿತಿಯಲ್ಲಿತ್ತು. ಸ್ವಚ್ಛ ವಾರ್ಡ್ ಜಟ್ಟಿಪಳ್ಳ ಅಭಿಯಾನ ಇದರ ಮೂರನೇ ಹಂತದ ಕಾರ್ಯಕ್ರಮ ದಲ್ಲಿ ಶುಚಿಗೊಳಿಸಿದರು .
ಅಭಿಯಾನದಲ್ಲಿ ಸಿ.ಎಫ್.ಸಿ ಅಧ್ಯಕ್ಷ ನಾಸಿರ್ ಸಿ.ಎ, ಗ್ರೀನ್ ಬಾಯ್ಸ್ ಅಸೋಸಿಯೇಶನ್ ಅಧ್ಯಕ್ಷ ಶಿಹಾಬ್ ಷಾ, ಜಟ್ಟಿಪಳ್ಳ ಫ್ರೆಂಡ್ಸ್ ಅಧ್ಯಕ್ಷ ಶರೀಫ್ , ಕರವೇ ಸ್ವಾಭಿಮಾನಿ ಬಣದ ಸುಳ್ಯ ನಗರ ಅಧ್ಯಕ್ಷ ರಶೀದ್ ಜಟ್ಟಿಪಳ್ಳ, ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಸಿ ಎಫ್ ಸಿ ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್ ಹಾಗೂ ಪದಾಧಿಕಾರಿಗಳಾದ ಸತ್ಯನಾರಯಯಣ, ಆಶಿರ್ ಜಟ್ಟಿಪಳ್ಳ, ಸುಲೈಮಾನ್ ಬಾಷ, ನೌಫಲ್ ಜಟ್ಟಿಪಳ್ಳ, ಫೈಸಲ್ ಜೆಟಿಪಿ ಮೊದಲಾದವರು ಭಾಗವಹಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…