Advertisement
ಸುದ್ದಿಗಳು

ಪರೋಪಕಾರ ಗುಣ ರೋಟೆರಿಯನ್ನರ ರಕ್ತದಲ್ಲಿದೆ

Share

ಬೆಳ್ಳಾರೆ: ಪರೋಪಕಾರ ಗುಣ ನಮ್ಮೆಲ್ಲರ ರಕ್ತದಲ್ಲಿದೆ. ಇನ್ನೊಬ್ಬರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸುವ ಗುಣ ರೋಟರಿಯನ್ನರಿಗಿದೆ. ಅದಕ್ಕಾಗಿಯೇ ರೋಟರಿಯು ವಿಶ್ವಮಾನ್ಯವಾಗಿದೆ ಎಂದು ಪದ ಪ್ರಧಾನ ಕಾರ್ಯಕ್ರಮ ನಡೆಸಿಕೊಟ್ಟ ಮಡಿಕೇರಿಯ ಖ್ಯಾತ ಲೆಕ್ಕ ಪರಿಶೋಧಕರೂ, ರೋಟರಿ ಜಿಲ್ಲೆಯ ಮಾಜಿ ಜಿಲ್ಲಾ ಕಾರ್ಯದರ್ಶಿ ಸಿ.ಎ ಈಶ್ವರ ಭಟ್ ನುಡಿದರು.

Advertisement
Advertisement

ಬೆಳ್ಳಾರೆಯ ಶ್ರೀದೇವಿ ಹೈಟ್ಸ್‍ನ ಸಭಾಂಗಣದಲ್ಲಿ ನಡೆದ 2019-20ನೇ ಸಾಲಿನ ನೂತನ ಸಮಿತಿಯ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕ್ರಮದ ನಿರ್ವಾಹಕನಾಗಿ ಅವರು ಮಾತನಾಡಿದರು.

ನೂತನ ಅಧ್ಯಕ್ಷರಾಗಿ ಬಿ. ನರಸಿಂಹ ಜೋಶಿಯವರು ಅಧಿಕಾರ ಸ್ವೀಕರಿಸಿ ಮುಂದಿನ ಯೋಜನೆಗಳ ಬಗ್ಗೆ ವಿವರ ನೀಡಿದರು. ಕ್ಲಬ್ಬಿನ ಉಪಾಧ್ಯಕ್ಷರಾಗಿ ಮೋನಪ್ಪ ಎ, ನಿರ್ದೇಶಕರುಗಳಾಗಿ ರವೀಂದ್ರ ಗೌಡ ಯಂ., ಬಿ. ಸುಬ್ರಹ್ಮಣ್ಯ ಜೋಶಿ, ಶಾಮಸುಂದರ ರೈ, ಚಂದ್ರಶೇಖರ ರೈ, ನವೀನ್ ಕುಮಾರ್ ರೈ, ತಂಬಿನಮಕ್ಕಿ, ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಪಿ. ಎಸ್.ರವರು  ಅಧಿಕಾರ ಸ್ವೀಕರಿಸಿದರು. ನೂತನ ಸದಸ್ಯನಾಗಿ ಸೀತಾರಾಮ ಶೆಟ್ಟಿಯವರನ್ನು ಕ್ಲಬ್ಬಿಗೆ ಸೇರ್ಪಡೆಗೊಳಿಸಲಾಯಿತು.

ಮುಖ್ಯ ಅತಿಥಿಯಾದ ಡಿಸ್ಟ್ರಿಕ್ಟ್ ಅಸಿಸ್ಟೆಂಟ್ ಗವರ್ನರ್ ಡಾ| ಪಿ. ಕೆ. ಕೇಶವರವರು ಕ್ಲಬ್ಬಿನಿಂದ ಹೊರತಂದ ರೋಟರಿ ವಾಣಿಯನ್ನು ಬಿಡುಗಡೆಗೊಳಿಸಿ ಕ್ಲಬಿನ ಕಾರ್ಯಚಟುವಟಿಕೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಝೋನಲ್ ಲೆಪ್ಟಿನೆಂಟ್ ಪ್ರಭಾಕರ ಆಳ್ವ ಭಜನಿಗುತ್ತು ಮತ್ತು ಸುಳ್ಯ ಕ್ಲಬಿನ ಅಧ್ಯಕ್ಷ ಡಾ| ಪುರುಷೋತ್ತಮರವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ಗಮಿತ ಅಧ್ಯಕ್ಷ ಎ.ಕೆ ಮಣಿಯಾಣಿ ವಹಿಸಿದರು. ವಿನಯ್ ಕುಮಾರ್ ಕೆ. ಸ್ವಾಗತಿಸಿ. ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಎಸ್.ರವರು ವರದಿ ವಾಚಿಸಿ ವಂದಿಸಿದರು. ಶ್ಯಾಮಸುಂದರ್ ರೈ ಕಾರ್ಯಕ್ರಮ ನಿರೂಪಿಸಿದರು.

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಸಮಿತಿ ಸದಸ್ಯರಿಂದ ವಿವಿಧ ಕೊಡುಗೆಗಳನ್ನು ನೀಡಲಾಯಿತು. ಜಿಲ್ಲಾ ಯೋಜನೆಗಳಾದ ‘ಜೀವನ್ ಸಂಧ್ಯಾ’ ಕಾರ್ಯಕ್ರಮದಡಿ ಇಬ್ಬರು ನಿರ್ಗತಿಕ ವೃದ್ಧ ಮಹಿಳೆಯರಿಗೆ ತಲಾ 25 ಕೆ. ಜಿ. ಅಕ್ಕಿ ಮತ್ತು ರೂಪಾಯಿ ಒಂದು ಸಾವಿರವನ್ನು ನೀಡಲಾಯಿತು. ಎ. ಕೆ. ಮಣಿಯಾಣಿ, ಗೋಪಾಲಕೃಷ್ಣ ಪಿ. ಯಸ್. ಮತ್ತು ಪ್ರಭಾಕರ ಆಳ್ವ ಕೊಡುಗೆ ನೀಡಿ ಸಹಕರಿಸಿದರು. ನೂತನ ಅಧ್ಯಕ್ಷ ನರಸಿಂಹ ಜೋಶಿಯವರ ಪ್ರಾಯೋಜಕತ್ವದಲ್ಲಿ ಬೆಳ್ಳಾರೆ ಕೆ.ಪಿ.ಎಸ್. ಸ್ಕೂಲ್‍ಗೆ ಫ್ಯಾನನ್ನು ನೀಡಲಾಯಿತು. ರೋಟರಿ ಪ್ರಾಯೋಜಕತ್ವದಲ್ಲಿ ಬೆಳ್ಳಾರೆ ಕೆ.ಪಿ.ಎಸ್.ನ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಕು| ಹೇಮಾಸ್ವಾತಿ ಕುರಿಯಾಜೆಯವರಿಗೆ ದತ್ತಿನಿಧಿ ಮೊತ್ತ ನೀಡಿ ಗೌರವಿಸಲಾಯಿತು. ರೋಟರಿ ಪೌಂಡೇಶನ್‍ಗೆ ಕ್ಲಬ್ ವತಿಯಿಂದ ಚೆಕ್ ಮೂಲಕ ದೇಣಿಗೆ ನೀಡಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

13 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

13 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago