ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?