ಸುಬ್ರಹ್ಮಣ್ಯ: ವ್ಯಾಪಾರ ವಹಿವಾಟಿನ ಜತೆಗೆ ಸಹಾಯ ಮಾಡುವ ಗುಣ ಹೊಂದಿರಬೇಕು. ಸಮಾಜದ ಹಲವು ಸಂಘ ಸಂಸ್ಥೆಗಳು ಸಮಾಜದಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರವುದು ಶ್ಲಾಘನೀಯ. ಪರಸ್ಪರ ಸಹಾಯ ಮಾಡುವ ಮನೋಭಾವನೆ ಎಲ್ಲರಲ್ಲೂ ಬೆಳೆಯಬೇಕು ಎಂದು ಸುಬ್ರಹ್ಮಣ್ಯ ಜೇಸಿಐನ ಹರಿಪ್ರಸಾದ್ ಎಂ ಹೇಳಿದರು.
ಸುಬ್ರಹ್ಮಣ್ಯ ಕೃಷ್ಣಪ್ಯಾಲೇಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಿತಿನ್ ನೂಚಿಲ ಮಾಲಕತ್ವ ಅರೆಂಜ್ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಪರ್ವತಮುಖಿ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ನೀಡಲಾದ ಕೊಡೆ ಹಾಗೂ ಶಾಲಾ ಬ್ಯಾಗು ವಿತರಿಸಿ ಮಾತನಾಡಿದರು.
ಮಾಲಕ ನಿತಿನ್ ಅವರು ಮಾತನಾಡಿ ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು.
ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಪುಟಾಣಿಗಳು ಉಪಸ್ಥಿತರಿದ್ದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…