Advertisement
ಜಿಲ್ಲೆ

ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಮಾನವನ ಅವಾಂತರವೇ ಕಾರಣ

Share

ಪುತ್ತೂರು: ನೆಲ, ಜಲವೇ ಮುಂತಾದ ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಬಲಿಯಾಗಿ ಇನ್ನೆಂದೂ ಸರಿಪಡಿಸಲಾರದಷ್ಟು ಮಟ್ಟಿಗೆ ಹಾನಿಯನ್ನು ಹೊಂದಿವೆ ಎಂದು ಪರಿಸರ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್ ಹೊಳ್ಳ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಐಎಸ್‍ಟಿಇ ಸ್ಟಾಫ್ ಚಾಪ್ಟರ್ ಇದರ ಆಶ್ರಯದಲ್ಲಿ ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತ ಮತ್ತು ಅದರ ಅಧ್ಯಯನ ಈ ವಿಷಯದ ಬಗ್ಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತಾಡಿದರು. ಮಾನವನ ಅವಾಂತರಗಳಿಂದ ಪದೇ ಪದೇ ಭೂಕುಸಿತಗಳು ಸಂಭವಿಸುತ್ತಿದ್ದು, ಕಳೆದ ಭಾರಿ ಉಂಟಾದ ಭೂಕುಸಿತಗಳು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದರು. ಐಐಎಸ್‍ಸಿ ಯ ತಂತ್ರಜ್ಞರ ಅಧ್ಯಯನದ ಪ್ರಕಾರ ಎತ್ತಿನ ಹೊಳೆ ಯೋಜನೆ ಒಂದು ವ್ಯರ್ಥ ಪ್ರಯತ್ನ. ಯೋಜನಾ ಪ್ರದೇಶದಲ್ಲೇ ಸಾಕಷ್ಟು ನೀರು ಲಭ್ಯವಿಲ್ಲ ಎಂದು ಅವರು ನುಡಿದರು.

ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕಳೆದ ಮಳೆಗಾಲದಲ್ಲಿ ನಡೆದ ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನ ಯೋಜನಾರಹಿತವಾದ ಕೆಲಸಗಳೇ ಕಾರಣ ಎಂದರು. ಹರಿಯುವ ನೀರನ್ನು ಚಲಿಸುವಂತೆ ಮಾಡಿ ಎಲ್ಲೆಡೆಯೂ ನೀರಿಂಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ನೀರಿನ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಪgಸರದ ಬಗ್ಗೆ ಜನಸಾಮಾನ್ಯರಲ್ಲಿ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿದೆ. ನಮ್ಮ ನಡೆ ಮತ್ತು ನುಡಿಯಲ್ಲಿ ಪರಿಸರದ ಬಗ್ಗೆ ಕಾಳಜಿ ಕಂಡುಬಂದರೆ ಪ್ರಾಕೃತಿಕ ಸಂಪತ್ತು ರಕ್ಷಣೆಯಾಗಬಹುದು ಎಂದರು.

ಪರಿಸರ ತಜ್ಞ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ ಡಾ.ಶ್ರೀಶ ಕುಮಾರ್, ವಿವೇಕಾನಂದ ಪಾಲಿಟೆಕ್ನಿಕ್‍ನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ  ಪ್ರೊ. ರವಿರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು .ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ, ಸುಮಂತ್ ವಂದಿಸಿದರು.  ಸಂಪದ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

12 minutes ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

28 minutes ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

50 minutes ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

9 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

19 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

23 hours ago