Advertisement
ಜಿಲ್ಲೆ

ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಮಾನವನ ಅವಾಂತರವೇ ಕಾರಣ

Share

ಪುತ್ತೂರು: ನೆಲ, ಜಲವೇ ಮುಂತಾದ ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಬಲಿಯಾಗಿ ಇನ್ನೆಂದೂ ಸರಿಪಡಿಸಲಾರದಷ್ಟು ಮಟ್ಟಿಗೆ ಹಾನಿಯನ್ನು ಹೊಂದಿವೆ ಎಂದು ಪರಿಸರ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್ ಹೊಳ್ಳ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಐಎಸ್‍ಟಿಇ ಸ್ಟಾಫ್ ಚಾಪ್ಟರ್ ಇದರ ಆಶ್ರಯದಲ್ಲಿ ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತ ಮತ್ತು ಅದರ ಅಧ್ಯಯನ ಈ ವಿಷಯದ ಬಗ್ಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತಾಡಿದರು. ಮಾನವನ ಅವಾಂತರಗಳಿಂದ ಪದೇ ಪದೇ ಭೂಕುಸಿತಗಳು ಸಂಭವಿಸುತ್ತಿದ್ದು, ಕಳೆದ ಭಾರಿ ಉಂಟಾದ ಭೂಕುಸಿತಗಳು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದರು. ಐಐಎಸ್‍ಸಿ ಯ ತಂತ್ರಜ್ಞರ ಅಧ್ಯಯನದ ಪ್ರಕಾರ ಎತ್ತಿನ ಹೊಳೆ ಯೋಜನೆ ಒಂದು ವ್ಯರ್ಥ ಪ್ರಯತ್ನ. ಯೋಜನಾ ಪ್ರದೇಶದಲ್ಲೇ ಸಾಕಷ್ಟು ನೀರು ಲಭ್ಯವಿಲ್ಲ ಎಂದು ಅವರು ನುಡಿದರು.

ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕಳೆದ ಮಳೆಗಾಲದಲ್ಲಿ ನಡೆದ ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನ ಯೋಜನಾರಹಿತವಾದ ಕೆಲಸಗಳೇ ಕಾರಣ ಎಂದರು. ಹರಿಯುವ ನೀರನ್ನು ಚಲಿಸುವಂತೆ ಮಾಡಿ ಎಲ್ಲೆಡೆಯೂ ನೀರಿಂಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ನೀರಿನ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಪgಸರದ ಬಗ್ಗೆ ಜನಸಾಮಾನ್ಯರಲ್ಲಿ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿದೆ. ನಮ್ಮ ನಡೆ ಮತ್ತು ನುಡಿಯಲ್ಲಿ ಪರಿಸರದ ಬಗ್ಗೆ ಕಾಳಜಿ ಕಂಡುಬಂದರೆ ಪ್ರಾಕೃತಿಕ ಸಂಪತ್ತು ರಕ್ಷಣೆಯಾಗಬಹುದು ಎಂದರು.

ಪರಿಸರ ತಜ್ಞ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ ಡಾ.ಶ್ರೀಶ ಕುಮಾರ್, ವಿವೇಕಾನಂದ ಪಾಲಿಟೆಕ್ನಿಕ್‍ನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ  ಪ್ರೊ. ರವಿರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು .ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ, ಸುಮಂತ್ ವಂದಿಸಿದರು.  ಸಂಪದ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

3 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago