Advertisement
ಜಿಲ್ಲೆ

ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಮಾನವನ ಅವಾಂತರವೇ ಕಾರಣ

Share

ಪುತ್ತೂರು: ನೆಲ, ಜಲವೇ ಮುಂತಾದ ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಬಲಿಯಾಗಿ ಇನ್ನೆಂದೂ ಸರಿಪಡಿಸಲಾರದಷ್ಟು ಮಟ್ಟಿಗೆ ಹಾನಿಯನ್ನು ಹೊಂದಿವೆ ಎಂದು ಪರಿಸರ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್ ಹೊಳ್ಳ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಐಎಸ್‍ಟಿಇ ಸ್ಟಾಫ್ ಚಾಪ್ಟರ್ ಇದರ ಆಶ್ರಯದಲ್ಲಿ ಪಶ್ಚಿಮ ಘಟ್ಟಗಳಲ್ಲಿ ಉಂಟಾಗುವ ಭೂಕುಸಿತ ಮತ್ತು ಅದರ ಅಧ್ಯಯನ ಈ ವಿಷಯದ ಬಗ್ಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತಾಡಿದರು. ಮಾನವನ ಅವಾಂತರಗಳಿಂದ ಪದೇ ಪದೇ ಭೂಕುಸಿತಗಳು ಸಂಭವಿಸುತ್ತಿದ್ದು, ಕಳೆದ ಭಾರಿ ಉಂಟಾದ ಭೂಕುಸಿತಗಳು ಇದಕ್ಕೊಂದು ಸ್ಪಷ್ಟ ನಿದರ್ಶನ ಎಂದರು. ಐಐಎಸ್‍ಸಿ ಯ ತಂತ್ರಜ್ಞರ ಅಧ್ಯಯನದ ಪ್ರಕಾರ ಎತ್ತಿನ ಹೊಳೆ ಯೋಜನೆ ಒಂದು ವ್ಯರ್ಥ ಪ್ರಯತ್ನ. ಯೋಜನಾ ಪ್ರದೇಶದಲ್ಲೇ ಸಾಕಷ್ಟು ನೀರು ಲಭ್ಯವಿಲ್ಲ ಎಂದು ಅವರು ನುಡಿದರು.

ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕಳೆದ ಮಳೆಗಾಲದಲ್ಲಿ ನಡೆದ ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನ ಯೋಜನಾರಹಿತವಾದ ಕೆಲಸಗಳೇ ಕಾರಣ ಎಂದರು. ಹರಿಯುವ ನೀರನ್ನು ಚಲಿಸುವಂತೆ ಮಾಡಿ ಎಲ್ಲೆಡೆಯೂ ನೀರಿಂಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ನೀರಿನ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಪgಸರದ ಬಗ್ಗೆ ಜನಸಾಮಾನ್ಯರಲ್ಲಿ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿದೆ. ನಮ್ಮ ನಡೆ ಮತ್ತು ನುಡಿಯಲ್ಲಿ ಪರಿಸರದ ಬಗ್ಗೆ ಕಾಳಜಿ ಕಂಡುಬಂದರೆ ಪ್ರಾಕೃತಿಕ ಸಂಪತ್ತು ರಕ್ಷಣೆಯಾಗಬಹುದು ಎಂದರು.

ಪರಿಸರ ತಜ್ಞ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ ಡಾ.ಶ್ರೀಶ ಕುಮಾರ್, ವಿವೇಕಾನಂದ ಪಾಲಿಟೆಕ್ನಿಕ್‍ನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ  ಪ್ರೊ. ರವಿರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು .ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ, ಸುಮಂತ್ ವಂದಿಸಿದರು.  ಸಂಪದ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago