ಸುದ್ದಿಗಳು

ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ನಿಷೇಧ ಮುಂದುವರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ  ಗುರುವಾರದಿಂದ ಗುಟ್ಕಾ ಮಾರಾಟ ನಿಷೇಧ ಮುಂದುವರಿದಿದೆ. ಮಮತಾ ಬ್ಯಾನರ್ಜಿ ಸರಕಾರವು ಪಶ್ಚಿಮ ಬಂಗಾಳದಲ್ಲಿ 2013ರಲ್ಲಿ ಮೊದಲ ಬಾರಿಗೆ ಗುಟ್ಕಾ ಮತ್ತು ಪಾನ್ ಮಸಾಲಾಗಳ ಮೇಲೆ ನಿಷೇಧ ಹೇರಿತ್ತು. 5 ವರ್ಷಗಳ ಬಳಿಕ ಮತ್ತೆ ಇನ್ನೂ ಒಂದು ವರ್ಷದ ಅವಧಿಗೆ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟದ ಮೇಲಿನ ನಿಷೇಧವನ್ನು ವಿಸ್ತರಿಸಿದೆ.ರಾಜ್ಯದಲ್ಲಿ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ಕುಟುಂಬ ಇಲಾಖೆಯ ಆಹಾರ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ರಾಜ್ಯದಲ್ಲಿ ನಿಕೋಟಿನ್ ಹೊಂದಿರುವ ಸಿಗರೇಟ್ ಉತ್ಪನ್ನಗಳ ಮೇಲೆ ನಿಷೇಧ ವಿಧಿಸಿಲ್ಲ.

Advertisement

2013 ರಲ್ಲಿ  ಬಹುತೇಕ ರಾಜ್ಯಗಳು ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದವು. ಈ ಸಂದರ್ಭ ಮಮತಾ ಬ್ಯಾನರ್ಜಿ ಸರಕಾರವ ಮೊದಲ ಬಾರಿಗೆ ಗುಟ್ಕಾ ನಿಷೇಧ ಮಾಡಿತ್ತು. ಬಳಿಕ  ಬಿಹಾರ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ರಾಜಸ್ಥಾನ ನಿಷೇಧ ಮಾಡಿದರೆ 2013ರಲ್ಲಿ ರಾಜ್ಯದಲ್ಲೂ ಗುಟ್ಕಾ ನಿಷೇಧ ಮಾಡಲಾಗಿತ್ತು, ಬಳಿಕ ತೀವ್ರ ಪ್ರತಿಭಟನೆ ಹಾಗೂ ಹೋರಾಟದ ಫಲವಾಗಿ ನಿಷೇಧವನ್ನು ಹಿಂಪಡೆಯಲು ತೀರ್ಮಾನಿಸಲಾಗಿತ್ತು. ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳ ಪ್ರತ್ಯೇಕ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಈಗಾಗಲೇ ತಂಬಾಕು, ನಿಕೋಟಿನ್, ಮ್ಯಾಗ್ನೇಷಿಯಂ ಕಾರ್ಬೊನೇಟ್ ಮತ್ತು ಮಿನರಲ್ ಆಯಿಲ್ ಹೊಂದಿರುವ ಪಾನ್ ಮಸಾಲಾಗಳನ್ನು ಸಂಪೂರ್ಣವಾಗಿ ನಿಷೇಧಿಸಿವೆ. ಒಟ್ಟು 24 ರಾಜ್ಯಗಳಲ್ಲಿ ಈ ನಿಷೇಧ ಭಾಗಶಃ ಜಾರಿಯಲ್ಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

56 minutes ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

2 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

2 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

12 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago