Advertisement
ಸುದ್ದಿಗಳು

ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ನಿಷೇಧ ಮುಂದುವರಿಕೆ

Share

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ  ಗುರುವಾರದಿಂದ ಗುಟ್ಕಾ ಮಾರಾಟ ನಿಷೇಧ ಮುಂದುವರಿದಿದೆ. ಮಮತಾ ಬ್ಯಾನರ್ಜಿ ಸರಕಾರವು ಪಶ್ಚಿಮ ಬಂಗಾಳದಲ್ಲಿ 2013ರಲ್ಲಿ ಮೊದಲ ಬಾರಿಗೆ ಗುಟ್ಕಾ ಮತ್ತು ಪಾನ್ ಮಸಾಲಾಗಳ ಮೇಲೆ ನಿಷೇಧ ಹೇರಿತ್ತು. 5 ವರ್ಷಗಳ ಬಳಿಕ ಮತ್ತೆ ಇನ್ನೂ ಒಂದು ವರ್ಷದ ಅವಧಿಗೆ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟದ ಮೇಲಿನ ನಿಷೇಧವನ್ನು ವಿಸ್ತರಿಸಿದೆ.ರಾಜ್ಯದಲ್ಲಿ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ಕುಟುಂಬ ಇಲಾಖೆಯ ಆಹಾರ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ರಾಜ್ಯದಲ್ಲಿ ನಿಕೋಟಿನ್ ಹೊಂದಿರುವ ಸಿಗರೇಟ್ ಉತ್ಪನ್ನಗಳ ಮೇಲೆ ನಿಷೇಧ ವಿಧಿಸಿಲ್ಲ.

2013 ರಲ್ಲಿ  ಬಹುತೇಕ ರಾಜ್ಯಗಳು ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದವು. ಈ ಸಂದರ್ಭ ಮಮತಾ ಬ್ಯಾನರ್ಜಿ ಸರಕಾರವ ಮೊದಲ ಬಾರಿಗೆ ಗುಟ್ಕಾ ನಿಷೇಧ ಮಾಡಿತ್ತು. ಬಳಿಕ  ಬಿಹಾರ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ರಾಜಸ್ಥಾನ ನಿಷೇಧ ಮಾಡಿದರೆ 2013ರಲ್ಲಿ ರಾಜ್ಯದಲ್ಲೂ ಗುಟ್ಕಾ ನಿಷೇಧ ಮಾಡಲಾಗಿತ್ತು, ಬಳಿಕ ತೀವ್ರ ಪ್ರತಿಭಟನೆ ಹಾಗೂ ಹೋರಾಟದ ಫಲವಾಗಿ ನಿಷೇಧವನ್ನು ಹಿಂಪಡೆಯಲು ತೀರ್ಮಾನಿಸಲಾಗಿತ್ತು. ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳ ಪ್ರತ್ಯೇಕ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಈಗಾಗಲೇ ತಂಬಾಕು, ನಿಕೋಟಿನ್, ಮ್ಯಾಗ್ನೇಷಿಯಂ ಕಾರ್ಬೊನೇಟ್ ಮತ್ತು ಮಿನರಲ್ ಆಯಿಲ್ ಹೊಂದಿರುವ ಪಾನ್ ಮಸಾಲಾಗಳನ್ನು ಸಂಪೂರ್ಣವಾಗಿ ನಿಷೇಧಿಸಿವೆ. ಒಟ್ಟು 24 ರಾಜ್ಯಗಳಲ್ಲಿ ಈ ನಿಷೇಧ ಭಾಗಶಃ ಜಾರಿಯಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

8 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

8 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

12 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago