ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

Advertisement
Advertisement

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

5 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

5 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

5 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

5 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

15 hours ago