ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

Advertisement

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

2 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

18 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

18 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

18 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

18 hours ago