Advertisement
ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

Advertisement
Advertisement

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

5 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago