ಬೆಳ್ಳಾರೆ : ಪಾಜಪಳ್ಳದಿಂದ ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.
ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…