Advertisement
ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

21 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago