Advertisement
ರಾಜ್ಯ

ಪಾಜಪಳ್ಳ – ಕಲ್ಮಡ್ಕ – ಕುಕ್ಕುಜಡ್ಕ ರಸ್ತೆಯ ಅವ್ಯವಸ್ಥೆ

Share

ಬೆಳ್ಳಾರೆ : ಪಾಜಪಳ್ಳದಿಂದ ‌ಕಲ್ಮಡ್ಕ ರಸ್ತೆಯ ಮಾರ್ಗವಾಗಿ ಕುಕ್ಕುಜಡ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು,ಸಾರ್ವಜನಿಕರು , ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುವಂತಾಗಿದೆ.

ಪಾಜಪಳ್ಳದಿಂದ ಪ್ರಾರಂಭವಾಗುವ ರಸ್ತೆಯು ಇಂದ್ರಾಜೆ ಗ್ರಾಮದಲ್ಲಿ ಹಾದು ಹೋಗಿ ಕಲ್ಮಡ್ಕ ಗ್ರಾಮಕ್ಕೆ ಸೇರಿ ನಂತರ ಕುಕ್ಕುಜಡ್ಕವನ್ನು ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವ ಪ್ರತಿ ಗ್ರಾಮದಲ್ಲಿ ನೂರಾರು ಮನೆಗಳಿವೆ , ನೂರಾರು ವಿದ್ಯಾರ್ಥಿಗಳು ಪ್ರತಿದಿನ ಬೇರೆ ಬೇರೆ ಕಡೆ ಶಾಲೆಗೆ ಹೋಗುತ್ತಾರೆ. ಸರಕಾರಿ ಶಾಲೆಗಳಿವೆ. ಸಹಕಾರಿ ಬ್ಯಾಂಕುಗಳು ಇವೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್ ಗಳು ಓಡಾಡುತ್ತವೆ. ಇನ್ನು ಖಾಸಗಿ ವಾಹನಕ್ಕೆ ಲೆಕ್ಕವಿಲ್ಲ. ಈ ರಸ್ತೆಯ ಮೂಲಕ ಸುಳ್ಯವನ್ನು ಸುಲಭವಾಗಿ ತಲುಪಬಹುದು. ಆದರೆ ರಸ್ತೆಯ ಅಧೋಗತಿ ಅವ್ಯವಸ್ಥೆ ಕಾರಣದಿಂದ ಯಾರು ಕೂಡ ಈ ರಸ್ತೆಯಲ್ಲಿ ಓಡಾಡಲು ಇಚ್ಚಿಸುವುದಿಲ್ಲ .ಸಮರ್ಪಕವಾದ ಚರಂಡಿ ವ್ಯವಸ್ಥೆಇಲ್ಲ. ರಸ್ತೆಯು ಒಂದು ಬಾಳೆಗಿಡ ನೆಡುವಷ್ಟು ದೊಡ್ಡ ಗುಂಡಿಗಳಾಗಿರುವುದರಿಂದ , ಡಾಮರ್ ಸಂಪೂರ್ಣವಾಗಿ ಕಿತ್ತು ಹೋಗಿರುವುದರಿಂದ ಅಲ್ಲದೆ ಮಳೆಯ ನೀರು ರಸ್ತೆಯಲ್ಲೆ ಹರಿದು ಕೆಸರುಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ ಸಂಪೂರ್ಣವಾಗಿ ಅಸುರಕ್ಷಿತ ರಸ್ತೆಯಾಗಿದೆ‌.ಈ ರಸ್ತೆಯ ಅವ್ಯವಸ್ಥೆ ಮೇಲಾಧಿಕಾರಿಗಳ ಗಮನಕ್ಕೆ ಬಂದಿದ್ದರು ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಈ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಿಕೊಡಬೇಕಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಒಕ್ಕೊರಲ ಒತ್ತಾಯವಾಗಿದೆ‌.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

2 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

8 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

18 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

18 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago