Advertisement
ಸುದ್ದಿಗಳು

ಪಾರದರ್ಶಕ ವ್ಯವಹಾರದಿಂದ ಸಂಘಟನೆ ವಿಶ್ವಾಸ ವೃದ್ಧಿ : ಕುಂಬ್ರ ದಯಾಕರ ಆಳ್ವ

Share

ಬೆಳ್ಳಾರೆ : ಸಂಘಟನೆಗಳು ಫಲಾಪೇಕ್ಷ ರಹಿತ ಸೇವೆಯೊಂದಿಗೆ ಪಾರದರ್ಶಕ ವ್ಯವಹಾರ, ಚಟುವಟಿಕೆಗಳಿಗೆ ಒತ್ತು ನೀಡಿದಾಗ ಸಮಾಜದ‌ ಸರ್ವರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು‌ ಮುಕ್ಕೂರು-ಕುಂಡಡ್ಕ‌ ಸಾರ್ವಜನಿಕ ಶ್ರೀ ಗಣೇಶೋತ್ಸವ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಹೇಳಿದರು.

Advertisement
Advertisement

ಮುಕ್ಕೂರು ‌ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಮತ್ತು ದಶಮಾನೋತ್ಸವ ವತಿಯಿಂದ ಸೆ.15 ರಂದು‌ ಮುಕ್ಕೂರಿನಲ್ಲಿ ನಡೆದ‌ ಹತ್ತರ ಹುತ್ತರಿ ಸಮಾರಂಭದ ಲೆಕ್ಕಪತ್ರ ಮಂಡನೆ‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಳೆದ‌ ಹತ್ತು ವರ್ಷದಿಂದ ಉತ್ತಮ‌ ಕಾರ್ಯಕ್ರಮ ಹಮ್ಮಿಕೊಂಡಿರುವ ಗಣೇಶೋತ್ಸವ ಸಮಿತಿಯ ಹತ್ತರ ಹುತ್ತರಿ ಅಭೂತಪೂರ್ವ ಯಶಸ್ಸು ಕಂಡಿದೆ.‌ ಸಮಾರಂಭದ ಮುಗಿದ ಕೆಲ‌ ದಿನಗಳಲ್ಲಿ ಖರ್ಚು ಜಮೆ ವೆಚ್ಚದ ಲೆಕ್ಕಪತ್ರವನ್ನು‌ ಸಾರ್ವಜನಿಕರ ಮುಂದಿಡುವ ಮೂಲಕ ಮಾದರಿ‌‌ ಹೆಜ್ಜೆ ಇಟ್ಟಿದೆ ಎಂದ ಅವರು, ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಮಿತಿ‌ ಕಾರ್ಯಾಧ್ಯಕ್ಷ ಉಮೇಶ್ ‌ಕೆಎಂಬಿ ಮಾತನಾಡಿ, ಒಳ್ಳೆಯ ಉದ್ದೇಶದ ಪರಿಶ್ರಮಕ್ಕೆ‌ ಪ್ರತಿಫಲ‌‌ ದೊರೆಯುತ್ತದೆ ಎನ್ನುವುದಕ್ಕೆ‌ ಹತ್ತರ ಹುತ್ತರಿ ಸಮಾರಂಭದ ಯಶಸ್ಸು ಉದಾಹರಣೆ. ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ‌ ಊರ-ಪರವೂರಿನ ಮೆಚ್ಚುಗೆಗೆ ಪಾತ್ರವಾಗಿದೆ. ಸಮಿತಿ‌ ಮುಂದಿನ ದಿನಗಳಲ್ಲಿ
ಇನ್ನಷ್ಟು ಸಮಾಜಮುಖಿ ಕಾರ್ಯಚಟುವಟಿಕೆ ಹಮ್ಮಿಕೊಂಡು ಯಶಸ್ವಿಯಾಗಲಿ‌ ಎಂದರು.

ಸಮಿತಿ ‌ಗೌರವ ಸಲಹೆಗಾರ ರಾಮಚಂದ್ರ ಕೋಡಿಬೈಲು ಮಾತನಾಡಿ, ಸಂಘಟನೆಗಳು ನಿರ್ದಿಷ್ಟ ಗುರಿ ತಲುಪಲು ಪ್ರತಿ ವ್ಯವಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಆಗ ಯಶಸ್ಸು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕುಂಡಡ್ಕ-ಮುಕ್ಕೂರು ಗಣೇಶೋತ್ಸವ ಸಮಿತಿ ಪಾರದರ್ಶಕ ವ್ಯವಸ್ಥೆಯೊಂದಿಗೆ ಮುನ್ನಡೆದಿದ್ದು, ಹತ್ತರ ಹುತ್ತರಿ ಸಮಾರಂಭದ ಯಶಸ್ಸಿಗೆ‌ ಮುಖ್ಯ ಕಾರಣ ಎಂದರು.

ಸಮಿತಿ ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ ಮಾತನಾಡಿ, ಸಂಘಟನೆಯ ಒಟ್ಟು ಉದ್ದೇಶ ಸಮಾಜಮುಖಿ ಆಗಿರಬೇಕು. ಆಗ ಜನರ ವಿಶ್ವಾಸ, ನಂಬಿಕೆ ಉಳಿದುಕೊಳ್ಳಲು ಸಾಧ್ಯವಿದೆ. ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ಒಗ್ಗಟ್ಟಿನ ನಿಲುವಿನೊಂದಿಗೆ ಯೋಜನೆ, ಯೋಚನೆ ಅನುಷ್ಠಾನಿಸುವ ಗಣೇಶೋತ್ಸವ ಸಮಿತಿ‌ ಸಮಾಜಕ್ಕೆ ‌ಮಾದರಿ‌ ಹೆಜ್ಜೆ ಇಟ್ಟಿದೆ ಎಂದರು.

ಪ್ರಗತಿಪರ ಕೃಷಿಕ ಎನ್.ಸುಬ್ರಾಯ ಭಟ್ ನೀರ್ಕಜೆ ‌ಮಾತನಾಡಿ, ಇಂತಹ ಕಾರ್ಯಕ್ರಮಗಳು‌ ಊರಿಗೂ ಸಂಭ್ರಮ ತಂದೊಡ್ಡಲು‌ ಪೂರಕ. ಎಲ್ಲರೂ ಜತೆಗೂಡಿ ದಶ ಸಂಭ್ರಮವನ್ನು ವ್ಯವಸ್ಥಿತವಾಗಿ ನಡೆಸಿರುವುದು‌ ಶ್ಲಾಘನೀಯ ಎಂದರು.

ಜ್ಯೋತಿ ಯುವಕ ಮಂಡಲ‌ ಗೌರವಾಧ್ಯಕ್ಷ ಸತ್ಯಪ್ರಸಾದ್ ಕಂಡಿಪ್ಪಾಡಿ ಮಾತನಾಡಿ, ಸಂಘಟಿತ ಪ್ರಯತ್ನದಿಂದ ಯಶಸ್ಸು ಸಾಧ್ಯ‌ ಎನ್ನುವುದಕ್ಕೆ‌ ಈ ಕಾರ್ಯಕ್ರಮ ಉದಾಹರಣೆ. ಊರಿನಲ್ಲಿ ‌ನಡೆಯುವ‌ ಪ್ರತಿ ಕಾರ್ಯಕ್ರಮವನ್ನು‌ ಎಲ್ಲರೂ ಸೇರಿ ಮಾದರಿಯಾಗಿ‌ ಸಂಘಟಿಸೋಣ ಎಂದರು.

ಸಭೆಯಲ್ಲಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಗುಡ್ಡಪ್ಪ ಗೌಡ ಅಡ್ಯತಕಂಡ, ಲಿಂಗಪ್ಪ ಗೌಡ ನೀರ್ಕಜೆ, ಸತ್ಯಪ್ರಭಾ,‌‌ ಸಾವಿತ್ರಿ ಕೆ, ನಾರಾಯಣ ಗೌಡ ಅಡ್ಯತಕಂಡ, ರಮೇಶ್ ಕಾನಾವು, ಪೂವಪ್ಪ ನಾಯ್ಕ‌ ಕೊಂಡೆಪ್ಪಾಡಿ, ರವೀಂದ್ರ ಅನವುಗುಂಡಿ, ರವಿ ಕುಂಡಡ್ಕ, ‌ರಕ್ಷಿತ್ ಗೌಡ ಒರುಂಕು, ವೆಂಕಟರಮಣ ‌ಕುಂಡಡ್ಕ ಮೊದಲಾದವರಿದ್ದರು.

ಸಮಿತಿ ಗೌರವಾಧ್ಯಕ್ಷ‌ ಜಗನ್ನಾಥ ಪೂಜಾರಿ ಮುಕ್ಕೂರು ಪ್ರಸ್ತಾವನೆಗೈದರು. ಕೋಶಾಧಿಕಾರಿ ರಾಮಚಂದ್ರ ಚೆನ್ನಾವರ ಲೆಕ್ಕಪತ್ರ ವರದಿ‌ ಮಂಡಿಸಿದರು. ‌ಕಿರಣ್ ಪ್ರಸಾದ್ ಕೆ‌‌ ಸ್ವಾಗತಿಸಿದರು. ಗಣೇಶೋತ್ಸವ ಸಮಿತಿ ‌ಅಧ್ಯಕ್ಷ ಪ್ರಸಾದ್ ಎನ್.ಕೆ.ವಂದಿಸಿದರು. ‌ಶಿಕ್ಷಕ‌ ಶಶಿಕುಮಾರ್ ‌ಬಿ.ಎನ್. ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

18 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

18 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago