ತಿರುವನಂತಪುರ: ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…