ತಿರುವನಂತಪುರ: ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…