Advertisement
ರಾಜ್ಯ

ಪಾಲಕ್ಕಾಡ್ ಅರಣ್ಯ ಪ್ರದೇಶದಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ ಮೂವರು ನಕ್ಸಲರ ಹತ್ಯೆ

Share

ತಿರುವನಂತಪುರ: ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ  ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.

ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್  2004ರಲ್ಲಿ ನಕ್ಸಲ್‌ ಸೇರಿದ್ದ.

ಪಾಲಕ್ಕಡ್‍ನ ಅರಣ್ಯ ಪ್ರದೇಶದಲ್ಲಿ  ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ  ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.

ಕರ್ನಾಟಕದ ಗಡಿ ಭಾಗದಲ್ಲಿ  ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 hour ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

10 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

17 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago