ತಿರುವನಂತಪುರ: ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…