ತಿರುವನಂತಪುರ: ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…