ತಿರುವನಂತಪುರ: ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಇದರಲ್ಲಿ ಇಬ್ಬರು ಕರ್ನಾಟಕ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಶ್ರೀಮತಿ ಹಾಗೂ ಸುರೇಶ್ ಹತ್ಯೆಯಾದ ನಕ್ಸಲರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಆದರೆ ಖಚಿತಗೊಂಡಿಲ್ಲ.
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ 2004ರಲ್ಲಿ ನಕ್ಸಲ್ ಸೇರಿದ್ದ.
ಪಾಲಕ್ಕಡ್ನ ಅರಣ್ಯ ಪ್ರದೇಶದಲ್ಲಿ ಕೇರಳದ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದೆ. ಮಾವೋವಾದಿಗಳ ಚಟುವಟಿಕೆ ಕೇರಳದಲ್ಲಿ ಈಚೆಗೆ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.ಕೊಂಬಿಂಗ್ ಕಾರ್ಯ ಮುಂದುವರೆದಿದೆ.
ಕರ್ನಾಟಕದ ಗಡಿ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನಕ್ಸಲ್ ಚಟುವಟಿಕೆ ಕಂಡುಬಂದಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿರಲಿಲ್ಲ. ಈ ಹಿಂದೆ ಶಿರಾಡಿ, ಗುಂಡ್ಯ, ಭಾಗಿಮಲೆ, ಕಲ್ಮಕಾರು ಸೇರಿದಂತೆ ವಿವಿದೆಡೆ ನಕ್ಸಲರ ಓಡಾಟದ ಬಗ್ಗೆ ಚರ್ಚೆ ನಡೆದಿತ್ತು, ಎ ಎನ್ ಎಫ್ ಕೂಂಬಿಂಗ್ ಕೂಡಾ ನಡೆಸಿತ್ತು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…