Advertisement
ನಮ್ಮೂರ ಸುದ್ದಿ

ಪಾಲ್ತಾಡಿಯಲ್ಲಿ ತಾಯಿಯ ಆಶೀರ್ವಾದ ಪಡೆದ ಸಂಸದ ನಳಿನ್

Share

ಸವಣೂರು : ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಪಾಲ್ತಾಡಿಯ ಕುಂಜಾಡಿಯ ಮನೆಯಲ್ಲಿ ತಾಯಿಯ ಆಶಿರ್ವಾದ ಪಡೆದುಕೊಂಡರು.

Advertisement
Advertisement

ಇದೇ ವೇಳೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ  ಬಿ.ಕೆ.ರಮೇಶ್ ಅವರಿಗೂ ನಮಿಸಿದರು.

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕುಂಜಾಡಿಗೆ ಆಗಮಿಸಿದ ನಳಿನ್ ಕುಮಾರ್ ಅವರನ್ನು  ಮನೆಯಲ್ಲಿ ಆರತಿ ಎತ್ತಿ ಸ್ವಾಗತಿಸಲಾಯಿತು.

ತನ್ನ ತಾಯಿ ಸುಶೀಲಾವತಿ ರೈ ಅವರ ಆಶೀರ್ವಾದ ಪಡೆದುಕೊಂಡರು.ತನ್ನ ಬೆಳವಣಿಗೆಯ ಹಿನ್ನೆಲೆಯಲ್ಲಿ ತಾಯಿಯ ತ್ಯಾಗ ದೊಡ್ಡದು ಎಂದು ಸಂಸದರು ಹೇಳಿದರು. ಈ ಸಂದರ್ಭ ಸಂಸದರ ಸಹೋದರ ನವೀನ್ ಕುಮಾರ್ ರೈ,ಅತ್ತಿಗೆ ಗೀತಾ , ಮನೋಹರ ರೈ ನರಿಮೊಗರು,ಪ್ರಮೋದ್ ಕೆ,ಆರ್ ಮೊದಲಾದವರಿದ್ದರು.

 

 

 

ಪಾಲ್ತಾಡಿಯ ಸ್ವಯಂಸೇವಕ:

ಮೂರನೇ ಬಾರಿಗೆ ಸಂಸದನಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತನ್ನ ಹುಟ್ಟೂರು ಪಾಲ್ತಾಡಿಯ ಕುಂಜಾಡಿ ಸಮೀಪದ ಮುಕ್ಕೂರು ಹಿ.ಪ್ರಾ.ಶಾಲೆಯಲ್ಲಿ ಪೂರೈಸಿದ್ದರು.ಇವರ ತಂದೆ ದಿ.ನಿರಂಜನ್ ಶೆಟ್ಟಿ, ತಾಯಿ ಸುಶೀಲಾವತಿ ಅವರು.
ಮುಕ್ಕೂರು ಶಾಲೆಯಲ್ಲಿ 2ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದಾಗ ಬಾಲಕ ನಳಿನ್ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್.ಎಸ್.ಎಸ್‍ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ .


ಬಿ.ಕೆ.ರಮೇಶ್ ಅವರು ಹೇಳುವಂತೆ ಬಾಲಕ ನಳಿನ್ ಕುಮಾರ್ ಅವರು ಪ್ರತಿದಿನ ತಪ್ಪದೇ ಶಾಖೆಗೆ ಹಾಜರಾಗುತ್ತಿದ್ದರಲ್ಲದೆ,ಸಂಘದ ವಿಚಾರಗಳಿಗೆ ಬಹುಬೇಗನೇ ಆಕರ್ಷಿತರಾಗಿ ಮುಂದೆ  ಸಂಘದ ಪ್ರಚಾರಕರಾಗಿ ಕೆಲಸ ಮಾಡಿದರು ಎಂದು ಬಿ.ಕೆ.ರಮೇಶ್ ಅವರ ಮನದಾಳದ ಮಾತು.

ಸಂಘದ ಪಾಲ್ತಾಡಿ ಶಾಖೆಯ ಮುಖ್ಯಶಿಕ್ಷಕರಾಗಿದ್ದ ಬಿ.ಕೆ.ರಮೇಶ್ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್ ಕುಮಾರ್ ಊರಿಗೆ ಬಂದಾಗ ಬಿ.ಕೆ.ರಮೇಶ್ ಅವರನ್ನು ಮಾತಾಡಿಸದೇ ಹೋಗುವುದು ಅಪರೂಪ.ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾಗಿ ಹಳ್ಳಿಯಿಂದ ದಿಲ್ಲಿಯ ಸಂಸತ್ ಭವನ ಪ್ರವೇಶಿಸುವ ನಳಿನ್ ಕುಮಾರ್ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ.ರಮೇಶ್.ಮೂರು ಬಾರಿಯ ಪ್ರಚಾರ ಸುಳ್ಯದಿಂದ ಆರಂಭಿಸುವಾಗಲೂ ತನ್ನ ಗುರು ಬಿ.ಕೆ.ರಮೇಶ್ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿಸುವ ಮೂಲಕ ಗುರುವಿಗೆ ಗೌರವ ತಂದಿದ್ದಾರೆ. ಪ್ರತೀ ವರ್ಷವೂ ತಾನು ಬೆಳೆದ ಮಂಜುನಾಥನಗರದ ಸಿದ್ದಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

2 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

23 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago