ಸವಣೂರು : ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಪಾಲ್ತಾಡಿಯ ಕುಂಜಾಡಿಯ ಮನೆಯಲ್ಲಿ ತಾಯಿಯ ಆಶಿರ್ವಾದ ಪಡೆದುಕೊಂಡರು.
ಇದೇ ವೇಳೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ ಅವರಿಗೂ ನಮಿಸಿದರು.
ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕುಂಜಾಡಿಗೆ ಆಗಮಿಸಿದ ನಳಿನ್ ಕುಮಾರ್ ಅವರನ್ನು ಮನೆಯಲ್ಲಿ ಆರತಿ ಎತ್ತಿ ಸ್ವಾಗತಿಸಲಾಯಿತು.
ಪಾಲ್ತಾಡಿಯ ಸ್ವಯಂಸೇವಕ:
ಮೂರನೇ ಬಾರಿಗೆ ಸಂಸದನಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತನ್ನ ಹುಟ್ಟೂರು ಪಾಲ್ತಾಡಿಯ ಕುಂಜಾಡಿ ಸಮೀಪದ ಮುಕ್ಕೂರು ಹಿ.ಪ್ರಾ.ಶಾಲೆಯಲ್ಲಿ ಪೂರೈಸಿದ್ದರು.ಇವರ ತಂದೆ ದಿ.ನಿರಂಜನ್ ಶೆಟ್ಟಿ, ತಾಯಿ ಸುಶೀಲಾವತಿ ಅವರು.
ಮುಕ್ಕೂರು ಶಾಲೆಯಲ್ಲಿ 2ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದಾಗ ಬಾಲಕ ನಳಿನ್ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್.ಎಸ್.ಎಸ್ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ .
ಬಿ.ಕೆ.ರಮೇಶ್ ಅವರು ಹೇಳುವಂತೆ ಬಾಲಕ ನಳಿನ್ ಕುಮಾರ್ ಅವರು ಪ್ರತಿದಿನ ತಪ್ಪದೇ ಶಾಖೆಗೆ ಹಾಜರಾಗುತ್ತಿದ್ದರಲ್ಲದೆ,ಸಂಘದ ವಿಚಾರಗಳಿಗೆ ಬಹುಬೇಗನೇ ಆಕರ್ಷಿತರಾಗಿ ಮುಂದೆ ಸಂಘದ ಪ್ರಚಾರಕರಾಗಿ ಕೆಲಸ ಮಾಡಿದರು ಎಂದು ಬಿ.ಕೆ.ರಮೇಶ್ ಅವರ ಮನದಾಳದ ಮಾತು.
ಸಂಘದ ಪಾಲ್ತಾಡಿ ಶಾಖೆಯ ಮುಖ್ಯಶಿಕ್ಷಕರಾಗಿದ್ದ ಬಿ.ಕೆ.ರಮೇಶ್ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್ ಕುಮಾರ್ ಊರಿಗೆ ಬಂದಾಗ ಬಿ.ಕೆ.ರಮೇಶ್ ಅವರನ್ನು ಮಾತಾಡಿಸದೇ ಹೋಗುವುದು ಅಪರೂಪ.ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾಗಿ ಹಳ್ಳಿಯಿಂದ ದಿಲ್ಲಿಯ ಸಂಸತ್ ಭವನ ಪ್ರವೇಶಿಸುವ ನಳಿನ್ ಕುಮಾರ್ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ.ರಮೇಶ್.ಮೂರು ಬಾರಿಯ ಪ್ರಚಾರ ಸುಳ್ಯದಿಂದ ಆರಂಭಿಸುವಾಗಲೂ ತನ್ನ ಗುರು ಬಿ.ಕೆ.ರಮೇಶ್ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿಸುವ ಮೂಲಕ ಗುರುವಿಗೆ ಗೌರವ ತಂದಿದ್ದಾರೆ. ಪ್ರತೀ ವರ್ಷವೂ ತಾನು ಬೆಳೆದ ಮಂಜುನಾಥನಗರದ ಸಿದ್ದಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.