ನಮ್ಮೂರ ಸುದ್ದಿ

ಪಾಲ್ತಾಡಿಯಲ್ಲಿ ತಾಯಿಯ ಆಶೀರ್ವಾದ ಪಡೆದ ಸಂಸದ ನಳಿನ್

Share

ಸವಣೂರು : ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಪಾಲ್ತಾಡಿಯ ಕುಂಜಾಡಿಯ ಮನೆಯಲ್ಲಿ ತಾಯಿಯ ಆಶಿರ್ವಾದ ಪಡೆದುಕೊಂಡರು.

Advertisement
Advertisement

ಇದೇ ವೇಳೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ  ಬಿ.ಕೆ.ರಮೇಶ್ ಅವರಿಗೂ ನಮಿಸಿದರು.

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕುಂಜಾಡಿಗೆ ಆಗಮಿಸಿದ ನಳಿನ್ ಕುಮಾರ್ ಅವರನ್ನು  ಮನೆಯಲ್ಲಿ ಆರತಿ ಎತ್ತಿ ಸ್ವಾಗತಿಸಲಾಯಿತು.

ತನ್ನ ತಾಯಿ ಸುಶೀಲಾವತಿ ರೈ ಅವರ ಆಶೀರ್ವಾದ ಪಡೆದುಕೊಂಡರು.ತನ್ನ ಬೆಳವಣಿಗೆಯ ಹಿನ್ನೆಲೆಯಲ್ಲಿ ತಾಯಿಯ ತ್ಯಾಗ ದೊಡ್ಡದು ಎಂದು ಸಂಸದರು ಹೇಳಿದರು. ಈ ಸಂದರ್ಭ ಸಂಸದರ ಸಹೋದರ ನವೀನ್ ಕುಮಾರ್ ರೈ,ಅತ್ತಿಗೆ ಗೀತಾ , ಮನೋಹರ ರೈ ನರಿಮೊಗರು,ಪ್ರಮೋದ್ ಕೆ,ಆರ್ ಮೊದಲಾದವರಿದ್ದರು.

 

Advertisement

 

 

ಪಾಲ್ತಾಡಿಯ ಸ್ವಯಂಸೇವಕ:

ಮೂರನೇ ಬಾರಿಗೆ ಸಂಸದನಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತನ್ನ ಹುಟ್ಟೂರು ಪಾಲ್ತಾಡಿಯ ಕುಂಜಾಡಿ ಸಮೀಪದ ಮುಕ್ಕೂರು ಹಿ.ಪ್ರಾ.ಶಾಲೆಯಲ್ಲಿ ಪೂರೈಸಿದ್ದರು.ಇವರ ತಂದೆ ದಿ.ನಿರಂಜನ್ ಶೆಟ್ಟಿ, ತಾಯಿ ಸುಶೀಲಾವತಿ ಅವರು.
ಮುಕ್ಕೂರು ಶಾಲೆಯಲ್ಲಿ 2ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದಾಗ ಬಾಲಕ ನಳಿನ್ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್.ಎಸ್.ಎಸ್‍ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ .


ಬಿ.ಕೆ.ರಮೇಶ್ ಅವರು ಹೇಳುವಂತೆ ಬಾಲಕ ನಳಿನ್ ಕುಮಾರ್ ಅವರು ಪ್ರತಿದಿನ ತಪ್ಪದೇ ಶಾಖೆಗೆ ಹಾಜರಾಗುತ್ತಿದ್ದರಲ್ಲದೆ,ಸಂಘದ ವಿಚಾರಗಳಿಗೆ ಬಹುಬೇಗನೇ ಆಕರ್ಷಿತರಾಗಿ ಮುಂದೆ  ಸಂಘದ ಪ್ರಚಾರಕರಾಗಿ ಕೆಲಸ ಮಾಡಿದರು ಎಂದು ಬಿ.ಕೆ.ರಮೇಶ್ ಅವರ ಮನದಾಳದ ಮಾತು.

Advertisement

ಸಂಘದ ಪಾಲ್ತಾಡಿ ಶಾಖೆಯ ಮುಖ್ಯಶಿಕ್ಷಕರಾಗಿದ್ದ ಬಿ.ಕೆ.ರಮೇಶ್ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್ ಕುಮಾರ್ ಊರಿಗೆ ಬಂದಾಗ ಬಿ.ಕೆ.ರಮೇಶ್ ಅವರನ್ನು ಮಾತಾಡಿಸದೇ ಹೋಗುವುದು ಅಪರೂಪ.ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾಗಿ ಹಳ್ಳಿಯಿಂದ ದಿಲ್ಲಿಯ ಸಂಸತ್ ಭವನ ಪ್ರವೇಶಿಸುವ ನಳಿನ್ ಕುಮಾರ್ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ.ರಮೇಶ್.ಮೂರು ಬಾರಿಯ ಪ್ರಚಾರ ಸುಳ್ಯದಿಂದ ಆರಂಭಿಸುವಾಗಲೂ ತನ್ನ ಗುರು ಬಿ.ಕೆ.ರಮೇಶ್ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿಸುವ ಮೂಲಕ ಗುರುವಿಗೆ ಗೌರವ ತಂದಿದ್ದಾರೆ. ಪ್ರತೀ ವರ್ಷವೂ ತಾನು ಬೆಳೆದ ಮಂಜುನಾಥನಗರದ ಸಿದ್ದಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

28 minutes ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

35 minutes ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

45 minutes ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

1 day ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago