Advertisement
ನಮ್ಮೂರ ಸುದ್ದಿ

ಪಾಲ್ತಾಡಿಯಲ್ಲಿ ತಾಯಿಯ ಆಶೀರ್ವಾದ ಪಡೆದ ಸಂಸದ ನಳಿನ್

Share

ಸವಣೂರು : ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಪಾಲ್ತಾಡಿಯ ಕುಂಜಾಡಿಯ ಮನೆಯಲ್ಲಿ ತಾಯಿಯ ಆಶಿರ್ವಾದ ಪಡೆದುಕೊಂಡರು.

ಇದೇ ವೇಳೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ  ಬಿ.ಕೆ.ರಮೇಶ್ ಅವರಿಗೂ ನಮಿಸಿದರು.

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕುಂಜಾಡಿಗೆ ಆಗಮಿಸಿದ ನಳಿನ್ ಕುಮಾರ್ ಅವರನ್ನು  ಮನೆಯಲ್ಲಿ ಆರತಿ ಎತ್ತಿ ಸ್ವಾಗತಿಸಲಾಯಿತು.

ತನ್ನ ತಾಯಿ ಸುಶೀಲಾವತಿ ರೈ ಅವರ ಆಶೀರ್ವಾದ ಪಡೆದುಕೊಂಡರು.ತನ್ನ ಬೆಳವಣಿಗೆಯ ಹಿನ್ನೆಲೆಯಲ್ಲಿ ತಾಯಿಯ ತ್ಯಾಗ ದೊಡ್ಡದು ಎಂದು ಸಂಸದರು ಹೇಳಿದರು. ಈ ಸಂದರ್ಭ ಸಂಸದರ ಸಹೋದರ ನವೀನ್ ಕುಮಾರ್ ರೈ,ಅತ್ತಿಗೆ ಗೀತಾ , ಮನೋಹರ ರೈ ನರಿಮೊಗರು,ಪ್ರಮೋದ್ ಕೆ,ಆರ್ ಮೊದಲಾದವರಿದ್ದರು.

 

 

 

ಪಾಲ್ತಾಡಿಯ ಸ್ವಯಂಸೇವಕ:

ಮೂರನೇ ಬಾರಿಗೆ ಸಂಸದನಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತನ್ನ ಹುಟ್ಟೂರು ಪಾಲ್ತಾಡಿಯ ಕುಂಜಾಡಿ ಸಮೀಪದ ಮುಕ್ಕೂರು ಹಿ.ಪ್ರಾ.ಶಾಲೆಯಲ್ಲಿ ಪೂರೈಸಿದ್ದರು.ಇವರ ತಂದೆ ದಿ.ನಿರಂಜನ್ ಶೆಟ್ಟಿ, ತಾಯಿ ಸುಶೀಲಾವತಿ ಅವರು.
ಮುಕ್ಕೂರು ಶಾಲೆಯಲ್ಲಿ 2ನೇ ತರಗತಿಯಲ್ಲಿ ವಿದ್ಯಾರ್ಥಿಯಾಗಿದ್ದಾಗ ಬಾಲಕ ನಳಿನ್ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್.ಎಸ್.ಎಸ್‍ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ .


ಬಿ.ಕೆ.ರಮೇಶ್ ಅವರು ಹೇಳುವಂತೆ ಬಾಲಕ ನಳಿನ್ ಕುಮಾರ್ ಅವರು ಪ್ರತಿದಿನ ತಪ್ಪದೇ ಶಾಖೆಗೆ ಹಾಜರಾಗುತ್ತಿದ್ದರಲ್ಲದೆ,ಸಂಘದ ವಿಚಾರಗಳಿಗೆ ಬಹುಬೇಗನೇ ಆಕರ್ಷಿತರಾಗಿ ಮುಂದೆ  ಸಂಘದ ಪ್ರಚಾರಕರಾಗಿ ಕೆಲಸ ಮಾಡಿದರು ಎಂದು ಬಿ.ಕೆ.ರಮೇಶ್ ಅವರ ಮನದಾಳದ ಮಾತು.

ಸಂಘದ ಪಾಲ್ತಾಡಿ ಶಾಖೆಯ ಮುಖ್ಯಶಿಕ್ಷಕರಾಗಿದ್ದ ಬಿ.ಕೆ.ರಮೇಶ್ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್ ಕುಮಾರ್ ಊರಿಗೆ ಬಂದಾಗ ಬಿ.ಕೆ.ರಮೇಶ್ ಅವರನ್ನು ಮಾತಾಡಿಸದೇ ಹೋಗುವುದು ಅಪರೂಪ.ಸಂಸದರಾಗಿ ಮೂರನೇ ಬಾರಿಗೆ ಆಯ್ಕೆಯಾಗಿ ಹಳ್ಳಿಯಿಂದ ದಿಲ್ಲಿಯ ಸಂಸತ್ ಭವನ ಪ್ರವೇಶಿಸುವ ನಳಿನ್ ಕುಮಾರ್ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ.ರಮೇಶ್.ಮೂರು ಬಾರಿಯ ಪ್ರಚಾರ ಸುಳ್ಯದಿಂದ ಆರಂಭಿಸುವಾಗಲೂ ತನ್ನ ಗುರು ಬಿ.ಕೆ.ರಮೇಶ್ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿಸುವ ಮೂಲಕ ಗುರುವಿಗೆ ಗೌರವ ತಂದಿದ್ದಾರೆ. ಪ್ರತೀ ವರ್ಷವೂ ತಾನು ಬೆಳೆದ ಮಂಜುನಾಥನಗರದ ಸಿದ್ದಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago