ಸುದ್ದಿಗಳು

ಪಾಲ್ತಾಡಿಯ ಪಂಚೋಡಿ ಕೆರೆಗೆ ಕಾಯಕಲ್ಪ ಯೋಗ

Share

ಸವಣೂರು : ಪಾಲ್ತಾಡಿ ಗ್ರಾಮದ ಪಂಚೋಡಿ ಎಂಬಲ್ಲಿರುವ ಕೆರೆಯ ಅಭಿವೃದ್ದಿಗೆ ಯೋಗ ಕೂಡಿಬಂದಿದೆ. ಸುಮಾರು 75 ಎಕ್ರೆಗಳಿಗಿಂತಲೂ ಹೆಚ್ಚು ಕೃಷಿ ತೋಟಗಳಿಗೆ ನೀರುಣಿಸುತ್ತಿದ್ದ ಈ ಕೆರೆ ಪ್ರಸ್ತುತ ಹೂಳು ತುಂಬಿಕೊಂಡಿದ್ದು, ಇದರ ಅಭಿವೃದ್ದಿಗಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರ ಸೂಚನೆಯಂತೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ಸಿದ್ದ ಪಡಿಸಿದ್ದಾರೆ.

ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು ,ಹೂಳು ತೆಗೆದು ಇನ್ನಷ್ಟು ಉಪಯೋಗಿಯಾಗಿ ಹಾಗೂ ಇನ್ನಷ್ಟು ನೀರು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಕೆರೆ ಅಭಿವೃದ್ದಿಗಾಗಿ ಮೊದಲ ಹಂತದ ಕಾಮಗಾರಿಗೆ ಈಗಾಗಲೇ 90 ಲಕ್ಷ ರೂ ಅನುದಾನ ಮೀಸಲಿರಿಸಿದ್ದು, ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆ.

ಎಂದೂ ಬತ್ತದ ಪಂಚೋಡಿ ಕೆರೆ

ಪಂಚೋಡಿಯಲ್ಲಿನ ಈ ಕೆರೆ ಎಂದೂ ಬತ್ತಿಲ್ಲ,ಇಲ್ಲಿನ ಹಿರಿಯರು ಸುಮಾರು ನೂರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ಕೆರೆಯಾಗಿದ್ದು, ಈ ಕೆರೆ ಜಲಸಮೃದ್ದಿಯಿಂದ ಕೂಡಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಕುಡಿಯುವ ನೀರು, ಅಥವಾ ಕೃಷಿ ಬಳಕೆಗೆ ಉಪಯೋಗಿಸುವ ಕೆರೆ ಬಾವಿಗಳಲ್ಲಿ ಬಿರು ಬೇಸಿಗೆಯಲ್ಲೂ ನೀರು ಬತ್ತುತ್ತಿರಲಿಲ್ಲ. ಈಗ ಈ ಕೆರೆಯಲ್ಲಿ ಹೂಳು ತುಂಬಿದ್ದರಿಂದ ನೀರು ಹಿಡಿದಿಟ್ಟು ಕೊಳ್ಳುವ ಸಾಮರ್ಥ್ಯವೂ ಕಡಿಮೆಯಾಗಿದೆ.

 

ಉದ್ಯೋಗ ಖಾತರಿಯಿಂದ ಕೆಲಸ ನಡೆದಿತ್ತು

ಈ ಕೆರೆಯನ್ನು 3 ವರ್ಷಗಳ ಹಿಂದೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಕಾತರಿ ಯೋಜನೆಯ ಮೂಲಕ ಸ್ಥಳೀಯರು ಹೂಳು ತೆಗೆಯುವ ಕೆಲಸ ಮಾಡಿದ್ದರು,ಆದರೆ ಕೆರೆ ವಿಸ್ತೀರ್ಣವಾಗಿರುವುದರಿಂದ ಕೆರೆಯ ಒಂದು ಭಾಗದಲ್ಲಿ ಮಾತ್ರವೇ ಕೆಲಸ ಮಾಡುವಂತಾಯಿತು.
ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಂಪೂರ್ಣ ಹೂಳೆತ್ತುವ ಕಾರ್ಯ ಮಾಡದಿದ್ದರೂ ಇಂದಿಗೂ ಆ ಕೆರೆಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಬೇಸಿಗೆಗೆ ನೀರಿನ ಭವನೆ ಇಲ್ಲದಂತೆ ಮಾಡುತ್ತಿದೆ.
2 ವರ್ಷಗಳ ಹಿಂದೆ ಇಲ್ಲಿ ಕೆರೆ ಇರುವುದನ್ನು ಕಂಡ ಸುಳ್ಯ ಶಾಸಕ ಎಸ್.ಅಂಗಾರ ಈ ಕೆರೆ ಅಭಿವೃದ್ಧಿ ಮಾಡಿದರೆ ಕೃಷಿಕರೇ ಇರುವ ಈ ಭಾಗದ ಜನತೆಗೆ ವರದಾನವಾಗಬಹುದು ಎಂಬ ದೂರದೃಷ್ಟಿಯಿಂದ ಈ ಕೆರೆ ಅಭಿವೃದ್ದಿಗೆ ಮುಂದಾಗಿದ್ದಾರೆ.

ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ

ಶಾಸಕ ಎಸ್.ಅಂಗಾರ ಅವರ ಸೂಚನೆ ಮೇರೆಗೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಲಕ್ಷ್ಮಣ ಪೂಜಾರಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ,ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಕೃಷಿಕ ಪದ್ಮಪ್ರಸಾದ್ ಆರಿಗ ಪಂಚೋಡಿ, ಉದ್ಯೋಗ ಖಾತರಿ ಯೋಜನೆಯ ಎಂಜಿನಿಯರ್ ವಿನೋದ್ ಕೊೈಂಗಾಜೆ ಉಪಸ್ಥಿತರಿದ್ದರು.

ನೀರಿನ ಮೂಲವಾದ ಪಂಚೋಡಿ ಕೆರೆಯನ್ನು ಅಭಿವೃದ್ಧಿಪಡಿಸಬೇಕೆನ್ನುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ಮುಖಾಂತರಅನುದಾನ ಮೀಸಲಿರಿಸಲಾಗಿದೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆಎಸ್.ಅಂಗಾರ, ಶಾಸಕರು ಸುಳ್ಯ ವಿಧಾನ ಸಭಾ ಕ್ಷೇತ್ರ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ…

4 hours ago

ಹವಾಮಾನ ವರದಿ | 11-03-2025 | ಮೋಡದ ವಾತಾವರಣ – ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.17 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |

ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ…

11 hours ago

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!

ನಿಯಮಗಳು ಎಷ್ಟೇ ಇದ್ದರೂ ಹಲವು ಸಂದರ್ಭದಲ್ಲಿ ಅಭದ್ರತೆಯೂ ಅಷ್ಟೇ ಇದೆ...ಸಹಕಾರಿ ಸಂಘದಲ್ಲಿ ಇದೆಲ್ಲಾ…

18 hours ago

ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |

ಕುಂಭಮೇಳದ ಪಯಣದ ಅನುಭವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಕಳೆದ 8…

18 hours ago

3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…

1 day ago