Advertisement
ಸುದ್ದಿಗಳು

ಪಾಲ್ತಾಡಿಯ ಪಂಚೋಡಿ ಕೆರೆಗೆ ಕಾಯಕಲ್ಪ ಯೋಗ

Share

ಸವಣೂರು : ಪಾಲ್ತಾಡಿ ಗ್ರಾಮದ ಪಂಚೋಡಿ ಎಂಬಲ್ಲಿರುವ ಕೆರೆಯ ಅಭಿವೃದ್ದಿಗೆ ಯೋಗ ಕೂಡಿಬಂದಿದೆ. ಸುಮಾರು 75 ಎಕ್ರೆಗಳಿಗಿಂತಲೂ ಹೆಚ್ಚು ಕೃಷಿ ತೋಟಗಳಿಗೆ ನೀರುಣಿಸುತ್ತಿದ್ದ ಈ ಕೆರೆ ಪ್ರಸ್ತುತ ಹೂಳು ತುಂಬಿಕೊಂಡಿದ್ದು, ಇದರ ಅಭಿವೃದ್ದಿಗಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರ ಸೂಚನೆಯಂತೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ಸಿದ್ದ ಪಡಿಸಿದ್ದಾರೆ.

ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು ,ಹೂಳು ತೆಗೆದು ಇನ್ನಷ್ಟು ಉಪಯೋಗಿಯಾಗಿ ಹಾಗೂ ಇನ್ನಷ್ಟು ನೀರು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಕೆರೆ ಅಭಿವೃದ್ದಿಗಾಗಿ ಮೊದಲ ಹಂತದ ಕಾಮಗಾರಿಗೆ ಈಗಾಗಲೇ 90 ಲಕ್ಷ ರೂ ಅನುದಾನ ಮೀಸಲಿರಿಸಿದ್ದು, ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆ.

ಎಂದೂ ಬತ್ತದ ಪಂಚೋಡಿ ಕೆರೆ

ಪಂಚೋಡಿಯಲ್ಲಿನ ಈ ಕೆರೆ ಎಂದೂ ಬತ್ತಿಲ್ಲ,ಇಲ್ಲಿನ ಹಿರಿಯರು ಸುಮಾರು ನೂರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ಕೆರೆಯಾಗಿದ್ದು, ಈ ಕೆರೆ ಜಲಸಮೃದ್ದಿಯಿಂದ ಕೂಡಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಕುಡಿಯುವ ನೀರು, ಅಥವಾ ಕೃಷಿ ಬಳಕೆಗೆ ಉಪಯೋಗಿಸುವ ಕೆರೆ ಬಾವಿಗಳಲ್ಲಿ ಬಿರು ಬೇಸಿಗೆಯಲ್ಲೂ ನೀರು ಬತ್ತುತ್ತಿರಲಿಲ್ಲ. ಈಗ ಈ ಕೆರೆಯಲ್ಲಿ ಹೂಳು ತುಂಬಿದ್ದರಿಂದ ನೀರು ಹಿಡಿದಿಟ್ಟು ಕೊಳ್ಳುವ ಸಾಮರ್ಥ್ಯವೂ ಕಡಿಮೆಯಾಗಿದೆ.

 

ಉದ್ಯೋಗ ಖಾತರಿಯಿಂದ ಕೆಲಸ ನಡೆದಿತ್ತು

ಈ ಕೆರೆಯನ್ನು 3 ವರ್ಷಗಳ ಹಿಂದೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಕಾತರಿ ಯೋಜನೆಯ ಮೂಲಕ ಸ್ಥಳೀಯರು ಹೂಳು ತೆಗೆಯುವ ಕೆಲಸ ಮಾಡಿದ್ದರು,ಆದರೆ ಕೆರೆ ವಿಸ್ತೀರ್ಣವಾಗಿರುವುದರಿಂದ ಕೆರೆಯ ಒಂದು ಭಾಗದಲ್ಲಿ ಮಾತ್ರವೇ ಕೆಲಸ ಮಾಡುವಂತಾಯಿತು.
ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಂಪೂರ್ಣ ಹೂಳೆತ್ತುವ ಕಾರ್ಯ ಮಾಡದಿದ್ದರೂ ಇಂದಿಗೂ ಆ ಕೆರೆಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಬೇಸಿಗೆಗೆ ನೀರಿನ ಭವನೆ ಇಲ್ಲದಂತೆ ಮಾಡುತ್ತಿದೆ.
2 ವರ್ಷಗಳ ಹಿಂದೆ ಇಲ್ಲಿ ಕೆರೆ ಇರುವುದನ್ನು ಕಂಡ ಸುಳ್ಯ ಶಾಸಕ ಎಸ್.ಅಂಗಾರ ಈ ಕೆರೆ ಅಭಿವೃದ್ಧಿ ಮಾಡಿದರೆ ಕೃಷಿಕರೇ ಇರುವ ಈ ಭಾಗದ ಜನತೆಗೆ ವರದಾನವಾಗಬಹುದು ಎಂಬ ದೂರದೃಷ್ಟಿಯಿಂದ ಈ ಕೆರೆ ಅಭಿವೃದ್ದಿಗೆ ಮುಂದಾಗಿದ್ದಾರೆ.

ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ

ಶಾಸಕ ಎಸ್.ಅಂಗಾರ ಅವರ ಸೂಚನೆ ಮೇರೆಗೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಲಕ್ಷ್ಮಣ ಪೂಜಾರಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ,ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಕೃಷಿಕ ಪದ್ಮಪ್ರಸಾದ್ ಆರಿಗ ಪಂಚೋಡಿ, ಉದ್ಯೋಗ ಖಾತರಿ ಯೋಜನೆಯ ಎಂಜಿನಿಯರ್ ವಿನೋದ್ ಕೊೈಂಗಾಜೆ ಉಪಸ್ಥಿತರಿದ್ದರು.

ನೀರಿನ ಮೂಲವಾದ ಪಂಚೋಡಿ ಕೆರೆಯನ್ನು ಅಭಿವೃದ್ಧಿಪಡಿಸಬೇಕೆನ್ನುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ಮುಖಾಂತರಅನುದಾನ ಮೀಸಲಿರಿಸಲಾಗಿದೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆಎಸ್.ಅಂಗಾರ, ಶಾಸಕರು ಸುಳ್ಯ ವಿಧಾನ ಸಭಾ ಕ್ಷೇತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

6 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

13 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

14 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

14 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

16 hours ago