Advertisement
ಸುದ್ದಿಗಳು

ಪಾಲ್ತಾಡಿಯ ಪಂಚೋಡಿ ಕೆರೆಗೆ ಕಾಯಕಲ್ಪ ಯೋಗ

Share

ಸವಣೂರು : ಪಾಲ್ತಾಡಿ ಗ್ರಾಮದ ಪಂಚೋಡಿ ಎಂಬಲ್ಲಿರುವ ಕೆರೆಯ ಅಭಿವೃದ್ದಿಗೆ ಯೋಗ ಕೂಡಿಬಂದಿದೆ. ಸುಮಾರು 75 ಎಕ್ರೆಗಳಿಗಿಂತಲೂ ಹೆಚ್ಚು ಕೃಷಿ ತೋಟಗಳಿಗೆ ನೀರುಣಿಸುತ್ತಿದ್ದ ಈ ಕೆರೆ ಪ್ರಸ್ತುತ ಹೂಳು ತುಂಬಿಕೊಂಡಿದ್ದು, ಇದರ ಅಭಿವೃದ್ದಿಗಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರ ಸೂಚನೆಯಂತೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ಸಿದ್ದ ಪಡಿಸಿದ್ದಾರೆ.

ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು ,ಹೂಳು ತೆಗೆದು ಇನ್ನಷ್ಟು ಉಪಯೋಗಿಯಾಗಿ ಹಾಗೂ ಇನ್ನಷ್ಟು ನೀರು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಕೆರೆ ಅಭಿವೃದ್ದಿಗಾಗಿ ಮೊದಲ ಹಂತದ ಕಾಮಗಾರಿಗೆ ಈಗಾಗಲೇ 90 ಲಕ್ಷ ರೂ ಅನುದಾನ ಮೀಸಲಿರಿಸಿದ್ದು, ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆ.

ಎಂದೂ ಬತ್ತದ ಪಂಚೋಡಿ ಕೆರೆ

ಪಂಚೋಡಿಯಲ್ಲಿನ ಈ ಕೆರೆ ಎಂದೂ ಬತ್ತಿಲ್ಲ,ಇಲ್ಲಿನ ಹಿರಿಯರು ಸುಮಾರು ನೂರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ಕೆರೆಯಾಗಿದ್ದು, ಈ ಕೆರೆ ಜಲಸಮೃದ್ದಿಯಿಂದ ಕೂಡಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಕುಡಿಯುವ ನೀರು, ಅಥವಾ ಕೃಷಿ ಬಳಕೆಗೆ ಉಪಯೋಗಿಸುವ ಕೆರೆ ಬಾವಿಗಳಲ್ಲಿ ಬಿರು ಬೇಸಿಗೆಯಲ್ಲೂ ನೀರು ಬತ್ತುತ್ತಿರಲಿಲ್ಲ. ಈಗ ಈ ಕೆರೆಯಲ್ಲಿ ಹೂಳು ತುಂಬಿದ್ದರಿಂದ ನೀರು ಹಿಡಿದಿಟ್ಟು ಕೊಳ್ಳುವ ಸಾಮರ್ಥ್ಯವೂ ಕಡಿಮೆಯಾಗಿದೆ.

 

ಉದ್ಯೋಗ ಖಾತರಿಯಿಂದ ಕೆಲಸ ನಡೆದಿತ್ತು

ಈ ಕೆರೆಯನ್ನು 3 ವರ್ಷಗಳ ಹಿಂದೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಕಾತರಿ ಯೋಜನೆಯ ಮೂಲಕ ಸ್ಥಳೀಯರು ಹೂಳು ತೆಗೆಯುವ ಕೆಲಸ ಮಾಡಿದ್ದರು,ಆದರೆ ಕೆರೆ ವಿಸ್ತೀರ್ಣವಾಗಿರುವುದರಿಂದ ಕೆರೆಯ ಒಂದು ಭಾಗದಲ್ಲಿ ಮಾತ್ರವೇ ಕೆಲಸ ಮಾಡುವಂತಾಯಿತು.
ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಂಪೂರ್ಣ ಹೂಳೆತ್ತುವ ಕಾರ್ಯ ಮಾಡದಿದ್ದರೂ ಇಂದಿಗೂ ಆ ಕೆರೆಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಬೇಸಿಗೆಗೆ ನೀರಿನ ಭವನೆ ಇಲ್ಲದಂತೆ ಮಾಡುತ್ತಿದೆ.
2 ವರ್ಷಗಳ ಹಿಂದೆ ಇಲ್ಲಿ ಕೆರೆ ಇರುವುದನ್ನು ಕಂಡ ಸುಳ್ಯ ಶಾಸಕ ಎಸ್.ಅಂಗಾರ ಈ ಕೆರೆ ಅಭಿವೃದ್ಧಿ ಮಾಡಿದರೆ ಕೃಷಿಕರೇ ಇರುವ ಈ ಭಾಗದ ಜನತೆಗೆ ವರದಾನವಾಗಬಹುದು ಎಂಬ ದೂರದೃಷ್ಟಿಯಿಂದ ಈ ಕೆರೆ ಅಭಿವೃದ್ದಿಗೆ ಮುಂದಾಗಿದ್ದಾರೆ.

ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ

ಶಾಸಕ ಎಸ್.ಅಂಗಾರ ಅವರ ಸೂಚನೆ ಮೇರೆಗೆ ಸಣ್ಣ ನಿರಾವರಿ ಇಲಾಖೆ ಇಂಜಿನಿಯರ್ ಲಕ್ಷ್ಮಣ ಪೂಜಾರಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ,ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಕೃಷಿಕ ಪದ್ಮಪ್ರಸಾದ್ ಆರಿಗ ಪಂಚೋಡಿ, ಉದ್ಯೋಗ ಖಾತರಿ ಯೋಜನೆಯ ಎಂಜಿನಿಯರ್ ವಿನೋದ್ ಕೊೈಂಗಾಜೆ ಉಪಸ್ಥಿತರಿದ್ದರು.

ನೀರಿನ ಮೂಲವಾದ ಪಂಚೋಡಿ ಕೆರೆಯನ್ನು ಅಭಿವೃದ್ಧಿಪಡಿಸಬೇಕೆನ್ನುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ಮುಖಾಂತರಅನುದಾನ ಮೀಸಲಿರಿಸಲಾಗಿದೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆಎಸ್.ಅಂಗಾರ, ಶಾಸಕರು ಸುಳ್ಯ ವಿಧಾನ ಸಭಾ ಕ್ಷೇತ್ರ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago