ಸವಣೂರು: ದ.ಕ.ಜಿ.ಪಂ.ಕೃಷಿ ಇಲಾಖೆ ಪುತ್ತೂರು ತಾ.ಕಡಬ ಹೋಬಳಿ ಇದರ 2019-20 ನೇ ಸಾಲಿನ ಬೀಜೋಪಚಾರ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಯ ತರಬೇತಿ ಕಾರ್ಯಕ್ರಮ ಸಿದ್ದಿವಿನಾಯಕ ಸೇವಾ ಸಂಘ ,ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ ಇದರ ಸಹಕಾರದೊಂದಿಗೆ ಪಾಲ್ತಾಡಿ ಮಂಜುನಾಥನಗರ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಗುರುವಾರ ನಡೆಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಉದ್ಘಾಟಿಸಿದರು.ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಸತೀಶ್ ಅಂಗಡಿಮೂಲೆ,ಪ್ರಕಾಶ್ ಕುದ್ಮನಮಜಲು,ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,ಗ್ರಾ.ಪಂ.ಮಾಜಿ ಸದಸ್ಯ ಬಾಳಪ್ಪ ಪೂಜಾರಿ,ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ,ವಿವೇಕಾನಂದ ಯುವಕ ಮಂಡಲದ ಗೌರವಾಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಪದ್ಮಪ್ರಸಾದ್ ಆರಿಗ ಪಂಚೋಡಿ ಮೊದಲಾದವರಿದ್ದರು.
ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ರೈ ಬೈಲಾಡಿ ಸ್ವಾಗತಿಸಿದರು. ಗಂಗಾಧರ ಪೆರಿಯಡ್ಕ ವಂದಿಸಿದರು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಪ್ರವೀಣ್ ಚೆನ್ನಾವರ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…