Advertisement
ಸುದ್ದಿಗಳು

ಪಾಸಿಟಿವ್ ನ್ಯೂಸ್ | ಮಾಸ್ಕ್ ತಯಾರಿಸಿ ಉಚಿತವಾಗಿ ಹಂಚಿದ ಮಹಿಳೆ | ಸಮಾಜ ಸೇವೆ ಹೀಗೂ ಮಾಡಬಹುದು |

Share

ಸುಳ್ಯ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮಗಳ ಕಡೆಗೆ ಸರಕಾರ ಎಚ್ಚರಿಸಿತು. ಸಾರ್ವಜನಿಕರು ಕಡ್ಡಾಯವಾಗಿ ಮುಖವಸ್ತ್ರ ( ಮಾ್ಸ್ಕ್ ) ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿತು.

ಈ ಸಂದರ್ಭ ಎಲ್ಲೆಡೆ ಮಾಸ್ಕ್ ಗೆ ಬೇಡಿಕೆ ವ್ಯಕ್ತವಾಯಿತು. ಈ ಸಂದರ್ಭ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೇ, ಅಗತ್ಯ ಸೇವೆ ಮಾಡುವ ಮಂದಿಗೇ ಮಾಸ್ಕ್ ಕೊರತೆ ಉಂಟಾಯಿತು. ಅನೇಕರು ಮಾಸ್ಕ್ ಇಲ್ಲ, ಮಾಸ್ಕ್ ಬಂದಿತೇ ಎಂದು ಟೀಕೆ ಮಾಡಿದರು, ಪ್ರಶ್ನೆ ಮಾಡಿದರು. ಆದರೆ ಇಲ್ಲೊಬ್ಬ ಮಹಿಳೆ ಈ   ಇದ್ಯಾವುದೂ ಕೇಳದೆ, ತನಗೆ ಸಾಧ್ಯವಾದಷ್ಟು, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮನೆಯಲ್ಲೇ ಮಾಸ್ಕ್ ಮಾಡಿದರು. ತಾವೇ ಸ್ವತ: ಹೊಲಿದರು. ಉಚಿತವಾಗಿ ಹಂಚಿದರು.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಸೀತಾಲಕ್ಷ್ಮಿ ಅವರು ಮಾಸ್ಕ್ ತಯಾರಿಸಿದ ಉಚಿತವಾಗಿ ಹಂಚಿದ ಮಹಿಳೆ. ಬಿಳಿ ಹತ್ತಿ ವಸ್ತ್ರಗಳಿಂದ ತಯಾರಿಸಿದ ಸುಮಾರು 50 ಕ್ಕೂ ಹೆಚ್ಚು ಮಾಸ್ಕ್ ಗಳನ್ನು ಈಗಾಗಲೇ ಉಚಿತವಾಗಿ ವಿತರಿಸಿದ್ದು ತುರ್ತು ಅವಶ್ಯಕತೆ ಇರುವವರಿಗೆ ಇನ್ನಷ್ಟು ವಿತರಿಸಲು ಸಿದ್ಧರಿದ್ದಾರೆ. ಅವರ ಮನೆಯಲ್ಲಿದೆ. ಈಗ ಹತ್ತಿಯ ಬಟ್ಟೆಯ ಕೊರತೆ ಅವರಲ್ಲಿದೆ. ಬಟ್ಟೆ ತಂದು ಕೊಟ್ಟರೆ ಇನ್ನಷ್ಟು ಮಾಸ್ಕ್ ಮಾಡಿ ವಿತರಣೆ ಮಾಡಬಲ್ಲೆ ಎನ್ನುತ್ತಾರೆ. ಸಮಾಜ ಸೇವೆ ಎನ್ನುವುದು  ಹೀಗೂ ಮಾಡಬಹುದು ಎನ್ನುವುದಕ್ಕೆ ಸೀತಾಲಕ್ಷ್ಮಿ ಅವರು ಸಾಕ್ಷಿಯಾಗಿದ್ದಾರೆ.

ಅವರ ಸಂಪರ್ಕ ಸಂಖ್ಯೆ : 9902846475

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago