Advertisement
ಸುದ್ದಿಗಳು

ಪಾಸಿಟಿವ್ ಸುದ್ದಿ | ಲಾಕ್ಡೌನ್ ನಡುವೆ ಮಾನವೀಯ ಕಾರ್ಯ | ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಮಾದರಿ ನಡೆ | ಲಾಕ್ಡೌನ್ ಅನುಷ್ಠಾನದಲ್ಲೂ- ಸೇವೆಯಲ್ಲೂ ಮಾದರಿ ಈ ಪಂಚಾಯತ್ |

Share

ಕೊರೊನಾ ಲಾಕ್ಡೌನ್ ಎಲ್ಲೆಡಬಿಗಿ ಬಂದೋ ಬಸ್ತ್. ಈ ಸಂದರ್ಭ ಅನೇಕರಿಗೆ ಅಗತ್ಯ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಬಡವರಿಗಂತೂ ಏನೇನೂ ಮಾಡಲು ಸಾಧ್ಯವಾಗಿಲ್ಲ. ಇಂತಹ ಬಡ ಕುಟುಂಬವೊಂದಕ್ಕೆ ನೆರವಾದ್ದು ಗುತ್ತಿಗಾರು ಗ್ರಾಪಂ ಅಧ್ಯಕ್ಷರ ನೇತೃತ್ವದ ತಂಡ. ಗುತ್ತಿಗಾರು ಕೊರೊನಾ ಕಾರ್ಯಪಡೆಯ ಸದಸ್ಯರೆಲ್ಲರ ಸಹಕಾರದಿಂದ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಈ ಕಾರ್ಯ ನೆರೆವೇರಿಸಿ ಮಾದರಿ ಎನಿಸಿದ್ದಾರೆ.


ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಅಡಿಕೆ ಮರದ ತುಂಡನ್ನು  ಹೊತ್ತು ತಂದರು…. !. ಇದು  ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಸಾಲ್ತಾಡಿಯಲ್ಲಿನ ಸುಬ್ರಾಯ ಗೌಡ ಅವರ ಮನೆ ದುರಸ್ತಿ ಕಾರ್ಯಕ್ಕೆ. ಇವರ ಜೊತೆ  ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಹಾಗೂ ಕೊರೊನಾ ಕಾರ್ಯಪಡೆಯ ಸದಸ್ಯರು ಸಾತ್ ನೀಡಿದ್ದಾರೆ. 3 ದಿನಗಳ ಸತತ ಕೆಲಸದಿಂದ ಬಡ ಕುಟುಂಬವೊಂದಕ್ಕೆ ಮನೆ ದುರಸ್ತಿ ಮಾಡಿಸಿದ್ದಾರೆ. ಕೊರೊನಾ ಲಾಕ್ಡೌನ್ ನಡುವೆ ಮಾದರಿ ಕೆಲಸವನ್ನು ಈ ತಂಡ  ಮಾಡಿದೆ.

 

ಗುತ್ತಿಗಾರು ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಸಾಲ್ತಾಡಿಯಲ್ಲಿನ ಸುಬ್ರಾಯ ಗೌಡ ಅವರದು ಬಡ ಕುಟುಂಬ. ವಯಸ್ಸಾದ ಹಿನ್ನೆಲೆಯಲ್ಲಿ  ಕೆಲಸ ಮಾಡಲು ಕಷ್ಟವಾಗಿದೆ.  ಇವರ ಪತ್ನಿ ಭಾಗೀರಥಿ ವೃದ್ದೆಯಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ದಂಪತಿಗಳ ಮನೆ ಶಿಥಿಲವಾಗಿತ್ತು. ಇದನ್ನು ಗಮನಿಸಿದ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಗುತ್ತಿಗಾರು ನೇತೃತ್ವದ ತಂಡವು ಕೊರೊನಾ ಕಾರ್ಯ ಪಡೆ ಸದಸ್ಯರ ಮೂಲಕ ದುರಸ್ತಿಗೆ ಸಿದ್ಧವಾಯಿತು. ಇದಕ್ಕಾಗಿ ಬೇಕಾದ ಎಲ್ಲಾ ಸಾಮಾಗ್ರಿ ಸಿದ್ಧ ಮಾಡಿ  ಸ್ವತ: ಅಧ್ಯಕ್ಷರೇ ಮರಗಳನ್ನು  ಹೊತ್ತು ತಂದರು. ಅವರ ಜೊತೆ ಕಾರ್ಯಪಡೆ ಸದಸ್ಯರೂ ಸೇರಿಕೊಂಡರು. ಅದಾದ ಬಳಿಕ 2 ದಿನದಲ್ಲಿ  ಮನೆ ಕೆಲಸ ಪೂರ್ತಿ ಮಾಡಿ ಕೊಟ್ಟರು.

 

ಈ ಕುಟುಂಬಕ್ಕೆ ಊಟಕ್ಕೆ ಬೇಕಾದ ಕಿಟ್ ವ್ಯವಸ್ಥೆ ಮಾಡಲಾಗಿತ್ತು, ಪಡಿತರ ವ್ಯವಸ್ಥೆಗೆ ಈ ತಂಡವು ಬೇಕಾದ ಸಿದ್ಧತೆ ಮಾಡಿ ವಿದ್ಯುತ್ ಸಂಪರ್ಕಕ್ಕೂ ವ್ಯವಸ್ಥೆ ಮಾಡುವ ಮೂಲಕ ಗ್ರಾಮ ಪಂಚಾಯತ್ ಮಾನವೀಯ ಕೆಲಸವನ್ನು ಮಾಡಿದೆ. ಕೊರೊನಾ ನಡುವೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ನೇತೃತ್ವದ ತಂಡದ ಪಾಸಿಟಿವ್ ಕಾರ್ಯಕ್ಕೆ ಹಾಗೂ ಕಾರ್ಯಪಡೆಯ ಸದಸ್ಯರ ಮಾನವೀಯ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಗುತ್ತಿಗಾರು ಗ್ರಾಮ ಪಂಚಾಯತ್ ಕೊರೊನಾ ವೈರಸ್ ವಿರುದ್ಧ ವಿವಿಧ ರೀತಿಯ ಜಾಗೃತಿ ಕಾರ್ಯದ ಮೂಲಕವೂ ರಾಜ್ಯದ ಗಮನ ಸೆಳೆದಿತ್ತು. ಉನ್ನತ ಅಧಿಕಾರಿಗಳು ಪಂಚಾಯತ್ ಕಾರ್ಯವನ್ನು ಗಮನಿಸಿದ್ದರು. ಗ್ರಾಪಂ ಅಧ್ಯಕ್ಷ , ಪಿಡಿಒ ಹಾಗೂ ಕಾರ್ಯಪಡೆ ಸದಸ್ಯರು ಕೊರೊನಾ ಲಾಕ್ಡೌನ್ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಮಾಸ್ಕ್ ಅಳವಡಿಕೆ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದರು. ಅದಲ್ಲದೆ ಈಚೆಗೆ ಲಾಕ್ಡೌನ್ ಸಡಿಲಿಕೆ ಬಳಿಕವೂ ವರ್ತಕರ ಮನವೊಲಿಸಿ  ಮಧ್ಯಾಹ್ನದವರೆಗೆ ಮಾತ್ರವೇ ಅಂಗಡಿ ತೆರೆದು ಲಾಕ್ಡೌನ್ ಮುಂದುವರಿಸಲು ಹೆಜ್ಜೆ ಇರಿಸಿದ ಮೊದಲ ಪಂಚಾಯತ್ ಎಂದೂ ಜಿಲ್ಲೆಯಲ್ಲಿ  ಗಮನ ಸೆಳೆದಿತ್ತು. ಇದೀಗ ಮಾನವೀಯ ಕಾರ್ಯದ ಮೂಲಕ ಗುತ್ತಿಗಾರು ಗ್ರಾಮ ಪಂಚಾಯತ್ ಮತ್ತೆ ಗಮನಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

7 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

9 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

16 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

22 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago