ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.
ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.
ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008. ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…