ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.
ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.
ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008. ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…