ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.
ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.
ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008. ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…