Advertisement
ಸುದ್ದಿಗಳು

ಪಿಯುಸಿಯಲ್ಲಿ 600 ರಲ್ಲಿ 583 ಅಂಕ ಪಡೆದ ಮರಿಯಂ ರಫಾನ | ಸುಳ್ಯ ತಾಲೂಕಿಗೆ ಈಕೆ ಪ್ರಥಮ |

Share

ಸುಳ್ಯ: ಈ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿತ ಮರಿಯಂ ರಫಾನ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ 6೦೦ ರಲ್ಲಿ 583 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾಳೆ.

ಸುಳ್ಯದ ರಥಬೀದಿಯಲ್ಲಿ ಸುಮಾರು 40 ವರ್ಷದಿಂದ ಅಝಾದ್ ವಾಚ್ ವರ್ಕ್ಸ್ ಎಂಬ ಸಂಸ್ಥೆಯನ್ನು ನಡೆಸುವ ಕೆ.ಪಿ ಅಬ್ದುಲ್ ರಹಿಮಾನ್ ( ವಾಚ್ ಬಾಬಚ್ಚ) ಮತ್ತು ಝೌರಾ ದಂಪತಿಗಳ ಪುತ್ರಿ ಈಕೆ. ಕುರುಂಜಿ ವೆಂಕಟ್ರಮಣ ಗೌಡ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ. ಈಕೆ ಪಿಯುಸಿಯಲ್ಲಿ ಶೇ 98.25 ಅಂಕ ಪಡೆಯುವ ಮೂಲಕ  ಸುಳ್ಯ ತಾಲೂಕಿನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಈಕೆ ಭೌತಶಾಸ್ತ್ರ100, ಗಣಿತ 100, ಇಂಗ್ಲಿಷ್ 95 , ಹಿಂದಿ 95, ರಸಾಯನ ಶಾಸ್ತ್ರ 98 , ಜೀವಶಾಸ್ತ್ರ 95 ಅಂಕ ಪಡೆದಿದ್ದಾಳೆ.

ಈಕೆ ಕೇವಲ ಶಾಲಾ ಚಟುವಟಿಕೆಗಳಲ್ಲಿ ಮಾತ್ರವಲ್ಲ  ಗಾಂಧಿನಗರ ಮದರಸದ +2 ವಿದ್ಯಾರ್ಥಿ, ತನ್ನ ಸಾಧನೆಯನ್ನು ಮದರಸದಲ್ಲಿ ಕೂಡ ಮಾಡಿದ ಕೀರ್ತಿ ಈಕೆಯದು.ಇಲ್ಲಿ ಕೂಡ TOP + ಶ್ರೇಣಿಯನ್ನು ಪಡೆದಿದ್ದಾಳೆ. ಈ ಎಲ್ಲಾ ಸಾಧನೆಯ ಬಗ್ಗೆ ಹೇಳುವ ರಫಾನ, ನಿರಂತರ ಓದಿನಿಂದ ಸಾಧ್ಯವಾಯಿತು ಎನ್ನುತ್ತಾಳೆ. ಕಲಿಕೆಗೆ ವಿಶೇಷ ವೇಳಾಪಟ್ಟಿ ಏನು ಮಾಡಿಲ್ಲ,ರಾತ್ರಿ ಹೊತ್ತು ಒಂದಿಷ್ಟು ಓದಿ, ಬೆಳಗ್ಗೆ ನಮಾಝ್ ಮುಗಿಸಿ  5:30 ರಿಂದ 7..30 ಗಂಟೆಯ ವರೆಗೆ ಓದುತ್ತಿದ್ದೆ ತರಗತಿಯಲ್ಲಿ ಮಾಡಿದ ಪಾಠವನ್ನು ಏಕಾಗ್ರತೆಯಿಂದ ಕೇಳುತ್ತಿದ್ದೆ. ಗುರಿ ಸಾಧನೆಗೆ  ಏಕಾಗ್ರತೆಯೇ ಮುಖ್ಯ ಕಾರಣ ಎನ್ನುತ್ತಾಳೆ ಮರಿಯಂ ರಫಾನ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 hour ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

2 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

4 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

18 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago