ಮಂಗಳೂರು:ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎಂಬ 8 ವರ್ಷದ ಹುಲಿಯು ಐದು ಮರಿಗಳಿಗೆ ಜನ್ಮ ನೀಡಿದೆ. ಮರಿಗಳು ಅರೋಗ್ಯವಾಗಿವೆ. ರಾಣಿಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬಂದಿರುತ್ತದೆ. ಮರಿಗಳಿಗೆ ರೋಗನಿರೋಧಕ ಲಸಿಕೆ ನೀಡಿದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
ವಿಶಾಖಪಟ್ಟನಂ ಮೃಗಾಲಯದಿಂದ ತರಿಸಲಾದ ಸೀಳು ನಾಯಿಯು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 3 ಮರಿಗಳಿಗೆ ಜನನ ನೀಡಿರುತ್ತದೆ. ಸಂದರ್ಶಕರಿಗೆ ತಾಯಿ ಮತ್ತು ಮರಿಗಳನ್ನು ನೋಡುವ ಅವಕಾಶ ಕಲ್ಪಿಸಿಕೊಡಲಾಗಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮ :ತಿರುವನಂತಪುರಂ ಮೃಗಾಲಯದಿಂದ ರಿಯಾ ಪಕ್ಷಿ ಹಾಗೂ ತಿರುಪತಿ ಮೃಗಾಲಯದಿಂದ ಬಿಳಿ ಹುಲಿಗಳನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ತರಲಾಗುವುದು ಎಂದು ಹೆಚ್.ಜೆ ಭಂಡಾರಿ, ನಿರ್ದೇಶಕರು ಪಿಲುಕುಲ ಜೈವಿಕ ಉದ್ಯಾನವನ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…