Advertisement
ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

34 minutes ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

6 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

18 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

19 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago