Advertisement
ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

16 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

21 hours ago