ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.
ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.
ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…