ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.
ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಮೈಸೂರಿಂದ ಅಪರೂಪದ ನಾಲ್ಕು ಕಪ್ಪು ಹಂಸಗಳು, ಎರಡು ಪಟ್ಟೆ ಹೈನಗಳು ಮತ್ತು ಎರಡು ಕಾಡು ಕೋಣ ಮರಿಗಳು ಆಗಮಿಸಿದೆ. ಪಿಲಿಕುಳದಲ್ಲಿ ಕಾಡುಕೋಣಗಳ ಸಂಖ್ಯೆ ನಾಲ್ಕಕ್ಕೆ ಹೆಚ್ಚಿದೆ. ಪಿಲಿಕುಳದಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಎರಡು 3 ವರ್ಷ ಪ್ರಾಯದ ರಾಯಲ್ ಬೆಂಗಾಲ್ ಹುಲಿ, ನಾಲ್ಕು ಕಾಳಿಂಗ ಸರ್ಪ ಮತ್ತು ಎರಡು ಕಾಡು ಬಾತುಗಳನ್ನು ನೀಡಲಾಗಿದೆ.
ಕಪ್ಪು ಹಂಸಗಳು ಈಗಾಗಲೇ ವಿಕ್ಷಣೆಗೆ ಲಭ್ಯವಿದೆ. ಹೈನಗಳು ಒಂದು ವಾರದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಲಭ್ಯವಾಗಲಿದೆ.
ಶೀಘ್ರದಲ್ಲಿ ದೇಶದ ವಿವಿಧ ಮೃಗಾಲಯಗಳಿಂದ ಬಿಳಿ ಮತ್ತು ಕಂದು ರಿಯಾ ಪಕ್ಷಿಗಳು, ಎರಡು ಸ್ವೇಂಪ್ ಡೀರ್ಗಳು, ಒರ್ಯಂಟಾಲ್ ಡಾರ್ಟಾರ್ ಪಕ್ಷಿಗಳು, ಬಿಳಿ ಹುಲಿಗಳು ಆಗಮಿಸಲಿವೆ ಎಂದು ಮಂಗಳೂರು ಪಿಲಿಕುಳ ಜೈವಿಕ ಉದ್ಯಾವನ ನಿರ್ದೇಶಕ ಹೆಚ್.ಜೆ.ಭಂಡಾರಿ ಅವರ ಪ್ರಕಟಣೆ ತಿಳಿಸಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…