ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.
ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಮೈಸೂರಿಂದ ಅಪರೂಪದ ನಾಲ್ಕು ಕಪ್ಪು ಹಂಸಗಳು, ಎರಡು ಪಟ್ಟೆ ಹೈನಗಳು ಮತ್ತು ಎರಡು ಕಾಡು ಕೋಣ ಮರಿಗಳು ಆಗಮಿಸಿದೆ. ಪಿಲಿಕುಳದಲ್ಲಿ ಕಾಡುಕೋಣಗಳ ಸಂಖ್ಯೆ ನಾಲ್ಕಕ್ಕೆ ಹೆಚ್ಚಿದೆ. ಪಿಲಿಕುಳದಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಎರಡು 3 ವರ್ಷ ಪ್ರಾಯದ ರಾಯಲ್ ಬೆಂಗಾಲ್ ಹುಲಿ, ನಾಲ್ಕು ಕಾಳಿಂಗ ಸರ್ಪ ಮತ್ತು ಎರಡು ಕಾಡು ಬಾತುಗಳನ್ನು ನೀಡಲಾಗಿದೆ.
ಕಪ್ಪು ಹಂಸಗಳು ಈಗಾಗಲೇ ವಿಕ್ಷಣೆಗೆ ಲಭ್ಯವಿದೆ. ಹೈನಗಳು ಒಂದು ವಾರದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಲಭ್ಯವಾಗಲಿದೆ.
ಶೀಘ್ರದಲ್ಲಿ ದೇಶದ ವಿವಿಧ ಮೃಗಾಲಯಗಳಿಂದ ಬಿಳಿ ಮತ್ತು ಕಂದು ರಿಯಾ ಪಕ್ಷಿಗಳು, ಎರಡು ಸ್ವೇಂಪ್ ಡೀರ್ಗಳು, ಒರ್ಯಂಟಾಲ್ ಡಾರ್ಟಾರ್ ಪಕ್ಷಿಗಳು, ಬಿಳಿ ಹುಲಿಗಳು ಆಗಮಿಸಲಿವೆ ಎಂದು ಮಂಗಳೂರು ಪಿಲಿಕುಳ ಜೈವಿಕ ಉದ್ಯಾವನ ನಿರ್ದೇಶಕ ಹೆಚ್.ಜೆ.ಭಂಡಾರಿ ಅವರ ಪ್ರಕಟಣೆ ತಿಳಿಸಿದೆ.
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…