ಸುಳ್ಯ: 105 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದಲ್ಲಿ ಸನ್ಮಾನ ಸ್ವೀಕರಿಸಿದ ಸುಳ್ಯದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಪೆರಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಯವರು ಅಭಿನಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅವರ ಸಹೋದರರಾದ ಪಿ.ಬಿ ದಿವಾಕರ ರೈ, ಪಿ.ಬಿ ಪ್ರಭಾಕರ ರೈ, ಸುಳ್ಯದ ಕೆ ವಿ ಜಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ ಎಂ ದಯಾಕರ್ ಹಾಗೂ ಸಕಲೇಶಪುರ ರೈಲ್ವೆಯ ಸುಪೆರಿಂಟೆಂಡೆಂಟ್ ವಾಸಪ್ಪ ಶೆಟ್ಟಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel