ಪುಣ್ಚಪ್ಪಾಡಿ : ನವಜೀವನ ಸದಸ್ಯರಿಗೆ ಪ್ರೇರಣಾ ಶಿಬಿರ-ಹೊಂಬೆಳಕು ಉದ್ಘಾಟನೆ

September 29, 2019
9:35 AM

ಸವಣೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸವಣೂರು ವಲಯ ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಇವುಗಳ ಸಹಯೋಗದಲ್ಲಿ ಹೊಂಬೆಳಕು ನವಜೀವನ ಸದಸ್ಯರಿಗೆ ಪ್ರೇರಣಾ ಶಿಬಿರ ಪುಣ್ಚಪ್ಪಾಡಿ ವಿನಾಯಕನಗರದ ಗೌರಿಸದನದಲ್ಲಿ  ಶನಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಮಾತನಾಡಿ, ಮದ್ಯಮುಕ್ತರನ್ನು ಒಂದೆಡೆ ಸೇರಿಸಿಕೊಂಡು ಅವರನ್ನು ಸಮಾಜದ ಮುನ್ನೆಲೆಗೆ ಪರಿಚಯಿಸಿ ಅವರನ್ನು ಸಮಾಜಮುಖಿಯನ್ನಾಗಿಸುವ ಕಾರ್ಯಅಭಿನಂದನೀಯ.ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಗುರಿಯಡ್ಕ ಮಾತನಾಡಿ,ದುಶ್ಚಟ ಮುಕ್ತ ಸಮಾಜ ನಿರ್ಮಾಣವಾದಾಗ ಅಭಿವೃದ್ದಿಯೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಶಿಬಿರಗಳು ಪ್ರೇರಕವಾಗುತ್ತದೆ.ಮದ್ಯಪಾನವೆಂಬ ತಪ್ಪನ್ನು ತಿದ್ದಿಕೊಂಡು ಜೀವಿಸಿದಾಗ ಕುಟುಂಬ, ಸಮಾಜ ನೆಮ್ಮದಿಯನ್ನು ಕಾಣುತ್ತ್ತದೆ ಎಂದರು.

ವೇದಿಕೆಯಲ್ಲಿ ಪುಣ್ಚಪ್ಪಾಡಿ ಗೌರಿ ಗಣೇಶ ಸೇವಾ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ, ನವಜೀವನ ಸಮಿತಿಯ ಪೋಷಕ ಹೊನ್ನಪ್ಪ ಗೌಡ ಕೂರೇಲು ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಉಪಸ್ಥಿತರಿದ್ದರು.

ಅರವಿಂದ ಪುಣ್ಚತ್ತಾರು,ಹೇಮಲತಾ ಸೋಂಪಾಡಿ,ಮೀನಾಕ್ಷಿ ಕುಮಾರಮಂಗಲ,ಪ್ರವೀಣ್ ಚಂದ್ರ ರೈ ಕುಮೇರು,ಲಕ್ಷ್ಮಣ ಗೌಡ ಕೂರೇಲು,ಸುರೇಶ್,ಬಾಬು,ಚಿತ್ರಾ ಭಕ್ತಕೋಡಿ,ವಿಜಯ ಆರೇಲ್ತಡಿ,ವೆಂಕಪ್ಪ ಗೌಡ ಕುಮಾರಮಂಗಲ,ರಾಧಾಕೃಷ್ಣ ರೈ ಸರ್ವೆ,ಮನೋರಮ ಪುಣ್ಚಪ್ಪಾಡಿ,ಲೋಕೇಶ್ ಕನ್ಯಾಮಂಗಲ ,ವೇಣುಗೋಪಾಲ ಕಳುವಾಜೆ ಅತಿಥಿಗಳನ್ನು ಗೌರವಿಸಿದರು.

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಯೋಜನೆಯ ವಲಯ ಮೇಲ್ವಿಚಾರಕಿ ಅಶ್ವಿನಿ ವಂದಿಸಿದರು. ಲೋಕನಾಥ ವಜ್ರಗಿರಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror