Advertisement
ಸುದ್ದಿಗಳು

ಪುಣ್ಚಪ್ಪಾಡಿ : ನವಜೀವನ ಸದಸ್ಯರಿಗೆ ಪ್ರೇರಣಾ ಶಿಬಿರ-ಹೊಂಬೆಳಕು ಉದ್ಘಾಟನೆ

Share

ಸವಣೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸವಣೂರು ವಲಯ ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಇವುಗಳ ಸಹಯೋಗದಲ್ಲಿ ಹೊಂಬೆಳಕು ನವಜೀವನ ಸದಸ್ಯರಿಗೆ ಪ್ರೇರಣಾ ಶಿಬಿರ ಪುಣ್ಚಪ್ಪಾಡಿ ವಿನಾಯಕನಗರದ ಗೌರಿಸದನದಲ್ಲಿ  ಶನಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಮಾತನಾಡಿ, ಮದ್ಯಮುಕ್ತರನ್ನು ಒಂದೆಡೆ ಸೇರಿಸಿಕೊಂಡು ಅವರನ್ನು ಸಮಾಜದ ಮುನ್ನೆಲೆಗೆ ಪರಿಚಯಿಸಿ ಅವರನ್ನು ಸಮಾಜಮುಖಿಯನ್ನಾಗಿಸುವ ಕಾರ್ಯಅಭಿನಂದನೀಯ.ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಗುರಿಯಡ್ಕ ಮಾತನಾಡಿ,ದುಶ್ಚಟ ಮುಕ್ತ ಸಮಾಜ ನಿರ್ಮಾಣವಾದಾಗ ಅಭಿವೃದ್ದಿಯೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಶಿಬಿರಗಳು ಪ್ರೇರಕವಾಗುತ್ತದೆ.ಮದ್ಯಪಾನವೆಂಬ ತಪ್ಪನ್ನು ತಿದ್ದಿಕೊಂಡು ಜೀವಿಸಿದಾಗ ಕುಟುಂಬ, ಸಮಾಜ ನೆಮ್ಮದಿಯನ್ನು ಕಾಣುತ್ತ್ತದೆ ಎಂದರು.

ವೇದಿಕೆಯಲ್ಲಿ ಪುಣ್ಚಪ್ಪಾಡಿ ಗೌರಿ ಗಣೇಶ ಸೇವಾ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ, ನವಜೀವನ ಸಮಿತಿಯ ಪೋಷಕ ಹೊನ್ನಪ್ಪ ಗೌಡ ಕೂರೇಲು ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಉಪಸ್ಥಿತರಿದ್ದರು.

ಅರವಿಂದ ಪುಣ್ಚತ್ತಾರು,ಹೇಮಲತಾ ಸೋಂಪಾಡಿ,ಮೀನಾಕ್ಷಿ ಕುಮಾರಮಂಗಲ,ಪ್ರವೀಣ್ ಚಂದ್ರ ರೈ ಕುಮೇರು,ಲಕ್ಷ್ಮಣ ಗೌಡ ಕೂರೇಲು,ಸುರೇಶ್,ಬಾಬು,ಚಿತ್ರಾ ಭಕ್ತಕೋಡಿ,ವಿಜಯ ಆರೇಲ್ತಡಿ,ವೆಂಕಪ್ಪ ಗೌಡ ಕುಮಾರಮಂಗಲ,ರಾಧಾಕೃಷ್ಣ ರೈ ಸರ್ವೆ,ಮನೋರಮ ಪುಣ್ಚಪ್ಪಾಡಿ,ಲೋಕೇಶ್ ಕನ್ಯಾಮಂಗಲ ,ವೇಣುಗೋಪಾಲ ಕಳುವಾಜೆ ಅತಿಥಿಗಳನ್ನು ಗೌರವಿಸಿದರು.

ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಯೋಜನೆಯ ವಲಯ ಮೇಲ್ವಿಚಾರಕಿ ಅಶ್ವಿನಿ ವಂದಿಸಿದರು. ಲೋಕನಾಥ ವಜ್ರಗಿರಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

22 minutes ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

3 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

4 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

4 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

8 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

8 hours ago