ಸವಣೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸವಣೂರು ವಲಯ ,ರಾಜ್ಯ ಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲ ಇವುಗಳ ಸಹಯೋಗದಲ್ಲಿ ಹೊಂಬೆಳಕು ನವಜೀವನ ಸದಸ್ಯರಿಗೆ ಪ್ರೇರಣಾ ಶಿಬಿರ ಪುಣ್ಚಪ್ಪಾಡಿ ವಿನಾಯಕನಗರದ ಗೌರಿಸದನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಮಾತನಾಡಿ, ಮದ್ಯಮುಕ್ತರನ್ನು ಒಂದೆಡೆ ಸೇರಿಸಿಕೊಂಡು ಅವರನ್ನು ಸಮಾಜದ ಮುನ್ನೆಲೆಗೆ ಪರಿಚಯಿಸಿ ಅವರನ್ನು ಸಮಾಜಮುಖಿಯನ್ನಾಗಿಸುವ ಕಾರ್ಯಅಭಿನಂದನೀಯ.ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಗುರಿಯಡ್ಕ ಮಾತನಾಡಿ,ದುಶ್ಚಟ ಮುಕ್ತ ಸಮಾಜ ನಿರ್ಮಾಣವಾದಾಗ ಅಭಿವೃದ್ದಿಯೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಶಿಬಿರಗಳು ಪ್ರೇರಕವಾಗುತ್ತದೆ.ಮದ್ಯಪಾನವೆಂಬ ತಪ್ಪನ್ನು ತಿದ್ದಿಕೊಂಡು ಜೀವಿಸಿದಾಗ ಕುಟುಂಬ, ಸಮಾಜ ನೆಮ್ಮದಿಯನ್ನು ಕಾಣುತ್ತ್ತದೆ ಎಂದರು.
ವೇದಿಕೆಯಲ್ಲಿ ಪುಣ್ಚಪ್ಪಾಡಿ ಗೌರಿ ಗಣೇಶ ಸೇವಾ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ, ನವಜೀವನ ಸಮಿತಿಯ ಪೋಷಕ ಹೊನ್ನಪ್ಪ ಗೌಡ ಕೂರೇಲು ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು ಉಪಸ್ಥಿತರಿದ್ದರು.
ಅರವಿಂದ ಪುಣ್ಚತ್ತಾರು,ಹೇಮಲತಾ ಸೋಂಪಾಡಿ,ಮೀನಾಕ್ಷಿ ಕುಮಾರಮಂಗಲ,ಪ್ರವೀಣ್ ಚಂದ್ರ ರೈ ಕುಮೇರು,ಲಕ್ಷ್ಮಣ ಗೌಡ ಕೂರೇಲು,ಸುರೇಶ್,ಬಾಬು,ಚಿತ್ರಾ ಭಕ್ತಕೋಡಿ,ವಿಜಯ ಆರೇಲ್ತಡಿ,ವೆಂಕಪ್ಪ ಗೌಡ ಕುಮಾರಮಂಗಲ,ರಾಧಾಕೃಷ್ಣ ರೈ ಸರ್ವೆ,ಮನೋರಮ ಪುಣ್ಚಪ್ಪಾಡಿ,ಲೋಕೇಶ್ ಕನ್ಯಾಮಂಗಲ ,ವೇಣುಗೋಪಾಲ ಕಳುವಾಜೆ ಅತಿಥಿಗಳನ್ನು ಗೌರವಿಸಿದರು.
ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಯೋಜನೆಯ ವಲಯ ಮೇಲ್ವಿಚಾರಕಿ ಅಶ್ವಿನಿ ವಂದಿಸಿದರು. ಲೋಕನಾಥ ವಜ್ರಗಿರಿ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…