ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಹಾಡಿನ ಮುಕ್ತಾಯ ಸಮಾರಂಭ

Share

ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

6 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

6 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

6 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

14 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

14 hours ago