Advertisement

ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಹಾಡಿನ ಮುಕ್ತಾಯ ಸಮಾರಂಭ

Share

ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

52 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago