ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…